ದಾವಣಗೆರೆ(PDS): ಮೇ-2026ರ ಮಾಹೆಯಲ್ಲಿ ಎನ್.ಎಫ್.ಎಸ್.ಎ (NFSA) ಯೋಜನೆಯಡಿ ಮೇ ಮತ್ತು ಜೂನ್ ತಿಂಗಳ ಎರಡು ತಿಂಗಳ ಪಡಿತರವನ್ನು ಒಟ್ಟಾಗಿ ವಿತರಿಸಲು ಸರ್ಕಾರ ಆದೇಶಿಸಿದೆ. ದಾವಣಗೆರೆ ಜಿಲ್ಲೆಯ ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಅಂತ್ಯೋದಯ (AAY) ಕಾರ್ಡ್: ಪ್ರತಿ ಕಾರ್ಡಿಗೆ 28 ಕೆ.ಜಿ ಅಕ್ಕಿ ಮತ್ತು 42 ಕೆ.ಜಿ ರಾಗಿ ವಿತರಿಸಲಾಗುವುದು. ಆದ್ಯತಾ ಪಡಿತರ ಚೀಟಿ (PHH/BPL): ಪ್ರತಿ ಸದಸ್ಯರಿಗೆ 04 ಕೆ.ಜಿ ಅಕ್ಕಿ ಮತ್ತು 06 ಕೆ.ಜಿ ರಾಗಿ ವಿತರಿಸಲಾಗುವುದು. ರಾಜ್ಯ ಪಡಿತರ ಚೀಟಿ (State Cards): ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ ಮಾತ್ರ ಉಚಿತವಾಗಿ ನೀಡಲಾಗುವುದು. ಫಲಾನುಭವಿಗಳು ಮೇ ಮತ್ತು ಜೂನ್ ಮಾಹೆಯ ಪಡಿತರಕ್ಕಾಗಿ ಎರಡು ಬಾರಿ ಬಯೋ ಮೆಟ್ರಿಕ್ ದೃಢೀಕರಣ ನೀಡಬೇಕಾಗುತ್ತದೆ. ಪಡಿತರ ಪಡೆಯುವಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ. ಪ್ರತಿ ಪಡಿತರ ಚೀಟಿದಾರರು ಬಯೋ ದೃಢೀಕರಣ ನೀಡಿದ ತಕ್ಷಣ ನ್ಯಾಯಬೆಲೆ ಅಂಗಡಿಯಿಂದ ಕಂಪ್ಯೂಟರ್ ರಸೀದಿಯನ್ನು ಪಡೆದು, ಅದರಲ್ಲಿರುವ ಪ್ರಮಾಣದಂತೆ ಆಹಾರಧಾನ್ಯ ಪಡೆಯಬೇಕು. ನ್ಯಾಯಬೆಲೆ ಅಂಗಡಿಕಾರರು ಪಡಿತರ ವಿತರಣೆಯ ನಂತರ ಕಡ್ಡಾಯವಾಗಿ ಪ್ರತ್ಯೇಕ ರಶೀದಿ ನೀಡುವಂತೆ ಈಗಾಗಲೇ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ದಾವಣಗೆರೆ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 08192251552 ಅನ್ನು ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರಾದ ಮಧುಸೂಧನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ:(IGP) ಹರಿಹರದ ಪಂಚಮಸಾಲಿ ಮಠದಲ್ಲಿ ನಡೆದ ಘಟನೆಯೊಂದರ ವರದಿಗೆ ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ದುರ್ವರ್ತನೆ ತೋರಿರುವುದನ್ನು ಖಂಡಿಸಿ...
ದಾವಣಗೆರೆ(PDS): ಮೇ-2026ರ ಮಾಹೆಯಲ್ಲಿ ಎನ್.ಎಫ್.ಎಸ್.ಎ (NFSA) ಯೋಜನೆಯಡಿ ಮೇ ಮತ್ತು ಜೂನ್ ತಿಂಗಳ ಎರಡು ತಿಂಗಳ ಪಡಿತರವನ್ನು ಒಟ್ಟಾಗಿ ವಿತರಿಸಲು ಸರ್ಕಾರ ಆದೇಶಿಸಿದೆ. ದಾವಣಗೆರೆ ಜಿಲ್ಲೆಯ ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಅಂತ್ಯೋದಯ (AAY) ಕಾರ್ಡ್: ಪ್ರತಿ ಕಾರ್ಡಿಗೆ 28 ಕೆ.ಜಿ ಅಕ್ಕಿ ಮತ್ತು 42 ಕೆ.ಜಿ ರಾಗಿ ವಿತರಿಸಲಾಗುವುದು. ಆದ್ಯತಾ ಪಡಿತರ ಚೀಟಿ (PHH/BPL): ಪ್ರತಿ ಸದಸ್ಯರಿಗೆ 04 ಕೆ.ಜಿ ಅಕ್ಕಿ ಮತ್ತು 06 ಕೆ.ಜಿ ರಾಗಿ ವಿತರಿಸಲಾಗುವುದು. ರಾಜ್ಯ ಪಡಿತರ ಚೀಟಿ (State Cards): ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ ಮಾತ್ರ ಉಚಿತವಾಗಿ ನೀಡಲಾಗುವುದು. ಫಲಾನುಭವಿಗಳು ಮೇ ಮತ್ತು ಜೂನ್ ಮಾಹೆಯ ಪಡಿತರಕ್ಕಾಗಿ ಎರಡು ಬಾರಿ ಬಯೋ ಮೆಟ್ರಿಕ್ ದೃಢೀಕರಣ ನೀಡಬೇಕಾಗುತ್ತದೆ. ಪಡಿತರ ಪಡೆಯುವಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ. ಪ್ರತಿ ಪಡಿತರ ಚೀಟಿದಾರರು ಬಯೋ ದೃಢೀಕರಣ ನೀಡಿದ ತಕ್ಷಣ ನ್ಯಾಯಬೆಲೆ ಅಂಗಡಿಯಿಂದ ಕಂಪ್ಯೂಟರ್ ರಸೀದಿಯನ್ನು ಪಡೆದು, ಅದರಲ್ಲಿರುವ ಪ್ರಮಾಣದಂತೆ ಆಹಾರಧಾನ್ಯ ಪಡೆಯಬೇಕು. ನ್ಯಾಯಬೆಲೆ ಅಂಗಡಿಕಾರರು ಪಡಿತರ ವಿತರಣೆಯ ನಂತರ ಕಡ್ಡಾಯವಾಗಿ ಪ್ರತ್ಯೇಕ ರಶೀದಿ ನೀಡುವಂತೆ ಈಗಾಗಲೇ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ದಾವಣಗೆರೆ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 08192251552 ಅನ್ನು ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರಾದ ಮಧುಸೂಧನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ:(Congress) ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯವು ಇಂದು ಪೂರ್ಣಗೊಂಡಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ **ಸಮರ್ಥ ಶಾಮನೂರು** ಅವರು ಭರ್ಜರಿ ಜಯ ಸಾಧಿಸಿದ್ದಾರೆ...
Subscribe to our newsletter to get our newest articles instantly!
Excepteur sint occaecat cupidatat non proident