ಕ್ರೈಂ ಸುದ್ದಿ

ಲೋಕಾಯುಕ್ತ ಬಲೆಗೆ ಬಿದ್ದ ಹರಿಹರ ನಗರಸಭೆ ಸದಸ್ಯೆ ನಾಗರತ್ನ: ವೈದ್ಯ ಪುತ್ರ, ಪತಿ, ಇಂಜಿನಿಯರ್ ವಶಕ್ಕೆ

ಲೋಕಾಯುಕ್ತ ಬಲೆಗೆ ಬಿದ್ದ ಹರಿಹರ ನಗರಸಭೆ ಸದಸ್ಯೆ ನಾಗರತ್ನ: ವೈದ್ಯ ಪುತ್ರ, ಪತಿ, ಇಂಜಿನಿಯರ್ ವಶಕ್ಕೆ

ದಾವಣಗೆರೆ(ಹರಿಹರ):- ಗುತ್ತಿಗೆದಾರರಿಂದ ಲಂಚ ಸ್ವೀಕರಿಸುವಾಗ ಹರಿಹರ ನಗರಸಭೆ ಸದಸ್ಯೆ ಸೇರಿ ನಾಲ್ವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ನಗರಸಭೆಯ ವಾರ್ಡ್‌ 5 ರ ಸದಸ್ಯೆ ನಾಗರತ್ನಾ ಲೋಕಾಯುಕ್ತ ಬಲೆಗೆ ಬಿದ್ದವರು. ಅವರ ಪತಿ ಬ್ಯಾಂಕ್ ಉದ್ಯೋಗಿಯಾಗಿರುವ ಮಂಜುನಾಥ, ಪುತ್ರ ಎಂಬಿಬಿಎಸ್ ಡಾ.ರೇವಂತ ಅವರನ್ನೂ ಲೋಕಾ ಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗುತ್ತಿಗೆದಾರ ಮಜೀದ್ ಅವರಿಂದ ₹ 20,000 ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಾಮಗಾರಿಗಳ ಬಿಲ್‌ ಪಾಸ್‌ ಮಾಡಲು ಗುತ್ತಿಗೆದಾರರಿಗೆ ಲಂಚದ ಬೇಡಿಕೆ ಇಟ್ಟಿದ್ದ ಆರೋಪ ನಾಗರತ್ನಾ ಅವರ ಮೇಲಿದೆ. ‌‌ಇವರೊಂದಿಗೆ ಸೇರಿ ಕಾಮಗಾರಿಗಳ ಬಿಲ್‌ ಪಾಸ್‌ ಮಾಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂಜಿನಿಯರ್‌ ಅಬ್ದುಲ್‌ ಹಮೀದ್‌ ಅವರನ್ನೂ ವಶಕ್ಕೆ ಪಡೆಯಲಾಗಿದೆ.

ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Click to comment

Leave a Reply

Your email address will not be published. Required fields are marked *

Most Popular

To Top