ಕೆಐಎಡಿಬಿ ಭೂ ಸ್ವಾಧೀನಪಡಿಸಿಕೊಂಡ ಜಾಗದಲ್ಲಿ ಶೇ15 ರಷ್ಟುಆಸ್ಪತ್ರೆ, ಶಾಲೆ ವಸತಿ ನಿರ್ಮಾಣಕ್ಕೆ ಬಳಕೆ

15% of the land acquired by KIADB will be used for construction of hospital, school accommodation.

ಶಾಲೆ ವಸತಿ ನಿರ್ಮಾಣ

ಬೆಂಗಳೂರು: ಕೆಐಎಡಿಬಿ ಭೂ ಸ್ವಾಧೀನ ಮಾಡಿಕೊಳ್ಳುವಜಾಗದಲ್ಲಿ ಶೇ.15 ರಷ್ಟು ಭೂಮಿಯನ್ನು ಆಸ್ಪತ್ರೆ, ಶಾಲೆ, ವಸತಿಸೇರಿದಂತೆ ಇನ್ನಿತರೆ ಮೂಲ ಸೌಕರ್ಯಕ್ಕೆ ಬಳಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಹೇಳಿದ್ದಾರೆ.
ಮಂಗಳವಾರ ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯಮರಿತಿಬ್ಬೇಗೌಡ ಕೇಳಿದ ಪ್ರಶ್ನೆಗೆ ಸಚಿವರು, ಕೈಗಾರಿಕಾದ್ಯಮಿಗಳಿಗೆ ಭೂಮಿ ಹಂಚಿಕೆ ಮಾಡುವಾಗ ಉದ್ಯಮ ಹಾಗೂ ಕೈಗಾರಿಕೆಗಳಲ್ಲಿಕೆಲಸ ಮಾಡುವವರು ಹತ್ತಿರದಲ್ಲೇ ವಾಸ ಮಾಡಲು ಅಗತ್ಯವಾದವಸತಿ ನಿರ್ಮಿಸಲು, ಅದಕ್ಕೆ ಪೂರಕವಾಗಿ ಆಸ್ಪತ್ರೆ, ಶಿಕ್ಷಣ ಸಂಸ್ಥೆ ಸೇರಿಇತರ ಸೌಲಭ್ಯಗಳನ್ನು ಕಲ್ಪಿಸಲು ಮಂಜೂರಾದ ಭೂಮಿಯಲ್ಲಿಶೇ.15ರಷ್ಟು ಬಳಕೆ ಮಾಡಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.
ಅದೇ ರೀತಿ ಬ್ರಿಗೇಡ್ ಸಂಸ್ಥೆಗೆ ತಲಾ 25 ಎಕರೆಯಂತೆ ಎರಡು ಬಾರಿಭೂಮಿ ನೀಡಲಾಗಿದೆ. 2002ರಲ್ಲಿ ಭೂಮಿ ನೀಡಲಾಗಿತ್ತು. ಅದರಲ್ಲಿಶೇ.15ರಷ್ಟು ಭೂಮಿಯನ್ನು ವಸತಿ, ಆಸ್ಪತ್ರೆ, ಶಾಲೆ ಕಟ್ಟಲು ಬಳಕೆಮಾಡಿಕೊಳ್ಳುತ್ತಿದ್ದು, 11 ಟವರ್ ನಿರ್ಮಿಸುವ ಗುರಿ ಇದೆ. ಈಗಾಗಲೇ ಏಳು ಟವರ್ ನಿರ್ಮಿಸಲಾಗಿದೆ. ಬಾಕಿ ನಿರ್ಮಾಣ ಕಾಮಗಾರಿನಡೆಯುತ್ತಿದೆ. ಆ ಭೂಮಿಯಲ್ಲಿ ಬಡವರಿಗೆ ಮನೆ ನಿರ್ಮಿಸಿಕೊಡಲಾಗುವುದು ಎಂದು ನಿರಾಣಿ ತಿಳಿಸಿದರು.
ಕೌಶಲ್ಯ ಅಭಿವೃದ್ಧಿಗೆ ಖಾಸಗಿ ಸಹಭಾಗಿತ್ವದಲ್ಲಿ ಸಂಸ್ಥೆ ಸ್ಥಾಪಿಸಲು ಬ್ರಿಗೇಡ್ ಗ್ರೂಪ್ ಗೆ ಭೂಮಿ ನೀಡಲಾಗಿದೆ. ಅದನ್ನು ಉಚಿತವಾಗಿನೀಡಿಲ್ಲ, ಭೂಮಿಯಿಂದ ಸರ್ಕಾರಕ್ಕೆ ಬರಬೇಕಾದ ಹಣಪಡೆಯಲಾಗಿದೆ. ಇದರಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲಎಂದು ನಿರಾಣಿ ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!