Yoga Day: ಜೂ.21ಕ್ಕೆ 7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಮಾಧ್ಯಮ ಪ್ರತಿನಿಧಿಗಳಿಗೆ ಆಯುಷ್ ಕಿಟ್ ವಿತರಿಸಿದ ಡಿಸಿ
![](https://garudavoice.com/wp-content/uploads/2021/06/yoga_day_health_kit_given_by_dc_garudavoice_Davanagere_covid_lockdown1.jpg)
ದಾವಣಗೆರೆ: ಯೋಗ ನಮಗೆಲ್ಲರಿಗೂ ಆರೋಗ್ಯ ನೀಡಿದೆ, ನೀಡುತ್ತಿದೆ. ಯೋಗದ ಸದುಪಯೋಗ ಪಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳೋಣ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಯೋಗ ದಿನದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.21 ರ ಬೆಳಿಗ್ಗೆ 6 ರಿಂದ 8 ಗಂಟೆಯವರೆಗೆ ಆಯೋಜಿಸಲಾಗಿರುವ ಅಂತರಾಷ್ಟಿಯ ಯೋಗ ದಿನವನ್ನು ತಮ್ಮ ತಮ್ಮ ಮನೆಗಳಲ್ಲಿ ಯೋಗ ಮಾಡುವ ಮೂಲಕ ಯಶಸ್ವಿಗೊಳಿಸಿ ಎಂದರು.
“ಯೋಗಭ್ಯಾಸದೊಂದಿಗೆ ಇರಿ-ಮನೆಯಲ್ಲಿಯೇ ಇರಿ” ಎನ್ನುವ ಧ್ಯೇಯ ವಾಕ್ಯದೊಂದಿಗೆ ಬೆಂಗಳೂರಿನ ಚನ್ನಬಸವಣ್ಣ ಸ್ವಾಮೀಜಿಯವರು ಆನ್ ಲೈನ್ ಮೂಲಕ ಯೋಗ ಕಾರ್ಯಕ್ರಮ ನಡೆಸಿಕೊಡಲಿದ್ದು, ತಾವು ಮನೆಯಲ್ಲಿಯೇ ಯೋಗಾಭ್ಯಾಸ ಮಾಡುವ ಮೂಲಕ ಅಂತರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿಸಿ ಎಂದರು.
ಯೋಗ ದಿನದ ಅಂಗವಾಗಿ ನಾಳೆ ಬೆಳಿಗ್ಗೆ 10.30ಕ್ಕೆ ರಿಂಗ್ ರಸ್ತೆ, ಶಾರದಾಂಬ ದೇವಸ್ಥಾನದ ಸಮೀಪದ ಕರ್ನಾಟಕ ಹಿಮೋಫಿಲಿಯ ಸೊಸೈಟಿಯಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ರಕ್ತದಾನ ಮಾಡಿದವರಿಗೆಲ್ಲ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 18 ವರ್ಷ ಮೇಲ್ಪಟ್ಟವರಿಗೆ ಜೂ.21 ರಂದು ಉಚಿತವಾಗಿ ಕೋವಿಡ್ ಲಸಿಕೆ ಹಾಕಲಾಗುವುದು.
ಜೂ.19 ರ ಬೆಳಿಗ್ಗೆ 9 ಗಂಟೆಗೆ ಟ್ರಾಫಿಕ್ ಪೊಲೀಸರಿಗೆ ಕೊರೊನಾ ಹಿಮ್ಮೆಟಿಸಲು ಆರೋಗ್ಯ ರಕ್ಷ ಹಬೆ ಯಂತ್ರ ವಿತರಣೆ ಕಾರ್ಯಕ್ರಮವನ್ನು ನಗರದ ಟ್ರಾಫಿಕ್ ಪೊಲೀಸ್ ಸ್ಟೇಷನ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಹಾಗೂ ಮಧ್ಯಾಹ್ನ 12 ರಿಂದ ಸಂಜೆ 5 ಗಂಟೆಯವರೆಗೆ 8 ವರ್ಷದ ಮೇಲ್ಪಟ್ಟ ಎಲ್ಲಾ ವಯೋಮಿತಿಯವರಿಗೆ ಆನ್ಲೈನ್ ಯೋಗ ಸ್ಪರ್ಧೆ ಏರ್ಪಡಿಸಿದ್ದು, ಆಯ್ಕೆಯಾದ ಯೋಗಪಟುಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಲಾಗುವುದು. ಯೋಗ ಸ್ಪರ್ಧೆಯ ಆನ್ಲೈನ್ ಲಿಂಕ್ ಬಳಸಿ ಯೋಗ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದು.
ಜೂ.20 ರ ಬೆಳಿಗ್ಗೆ 6 ಗಂಟೆಗೆ ನಗರದ ಶಿರಮಗೊಂಡನಹಳ್ಳಿಯಲ್ಲಿರುವ ತರಳಬಾಳು ಕೋವಿಡ್ ಕೇರ್ ಸೆಂಟರ್, ಜೆ.ಹೆಚ್.ಪಟೇಲ್ ಬಡಾವಣೆ ಮತ್ತು ತಾಜ್ ಪ್ಯಾಲೇಸ್ ಅಲ್ಲಿರುವ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಕೋವಿಡ್ ಸೋಂಕಿತರಿಗೆ ಆತ್ಮಸ್ಥೆöÊರ್ಯ ತುಂಬಲು ಆರೋಗ್ಯ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಜಿಲ್ಲಾ ವರದಿಗಾರರ ಕೂಟ ಮತ್ತು ದಾವಣಗೆರೆ ಜಿಲ್ಲಾ ಯೋಗ ಒಕ್ಕೂಟದ ಆಶ್ರಯದಲ್ಲಿ ನಗರದ ಜಿಲ್ಲಾ ಪತ್ರಿಕಾ ಮಾಧ್ಯಮ ಪ್ರತಿನಿಧಿಗಳಿಗೆ ಆಯುಷ್ ಕಿಟ್ ವಿತರಿಸಲಾಯಿತು.
ಈ ವೇಳೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾಧ್ಯಮದವರಿಗೆ ಆಯುಷ್ ಕಿಟ್ ವಿತರಿಸಿ ಮಾತನಾಡಿದ ಅವರು, ವೈರಸ್ ನಿಯಂತ್ರಿಸಲು ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಕಿಟ್ಗಳು ಹೆಚ್ಚು ಉಪಯುಕ್ತವಾಗಿದ್ದು, ಅದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಜಿಲ್ಲಾ ಯೋಗ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಾಸುದೇವ್ ರಾಯ್ಕರ್ ಮಾತನಾಡಿ, ಚ್ಯವನ್ಪ್ರಾಶ ಸೇವನೆಯಿಂದ ಶ್ವಾಸಕೋಶದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು. ಇದರಿಂದ ದೇಹಕ್ಕೆ ಬರುವ ಯಾವುದೇ ವೈರಸ್ನ್ನು ತಡೆಗಟ್ಟಲು ಬೇಕಾದ ಸಾಮಾರ್ಥ್ಯ ನಮ್ಮಲ್ಲಿರುತ್ತದೆ. ಆದ್ದರಿಂದ ಇದರ ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.ಪ್ರತಿಯೊಬ್ಬರು ತಮಗೆ ಬರುವ ಯಾವುದೇ ಯೋಗದ, ಸೂರ್ಯ ನಮಸ್ಕಾರ, ವ್ಯಾಯಾಮಗಳನ್ನು ವೈಯಕ್ತಿಕ, ಕುಟುಂಬ ಅಥವಾ ಗ್ರೂಪ್ನಲ್ಲಿ ರೆಕಾರ್ಡ್ ಮಾಡಿ 1 ನಿಮಿಷದ ವಿಡಿಯೋವನ್ನು ಜೂ.21 ರಂದು 9480051462, 9844443119, 9916331671, 900873573 ಈ ನಂಬರಿಗೆ ಕಳಿಸಿಕೊಡಬೇಕು. ಆಯ್ದ 100 ವಿಡಿಯೋವನ್ನು ಲೋಕಲ್ ಟಿ.ವಿ ಮಾಧ್ಯಮದಲ್ಲಿ ಬಿತ್ತರಿಸಲಾಗುವುದು ಹಾಗೂ ಆಯ್ದ 10 ವಿಡಿಯೋಗಳಿಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ ಉಪಸ್ಥಿರಿದ್ದರು.