ಲೋಕಲ್ ಸುದ್ದಿ

ದಾವಣಗೆರೆಯಲ್ಲಿ ಫೆ.25ರಂದು ದೇವದಾಸಿ ಮಹಿಳೆಯರ ವಿಮೋಚನಾ ಸಂಘದ 4ನೇ ರಾಜ್ಯ ಸಮ್ಮೇಳನ

ದಾವಣಗೆರೆ: ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ 4ನೇ ರಾಜ್ಯ ಸಮ್ಮೇಳನವು ಇದೇ ಫೆ. 25 ಹಾಗೂ 26ರಂದು ದಾವಣಗೆರೆಯಲ್ಲಿ ನಡೆಯಲಿದೆ ಎಂದು ಸಂಘದ ಗೌರವಾಧ್ಯಕ್ಷ ಯು.ಬಸವರಾಜ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ದಿ.25ರಂದು ಮಧ್ಯಾಹ್ನ 12 ಗಂಟೆಗೆ ಜಯದೇವ ವೃತ್ತದಲ್ಲಿನ ಮುರುಘಾಮಠ ಆವರಣದಲ್ಲಿ ಬೃಹತ್ ಬಹಿರಂಗ ಸಭೆ ಆಯೋಜಿಸಲಾಗಿದೆ. ಸಭೆಯನ್ನು ನವದಹೆಲಿ ದಲಿತ ಶೋಷಣ ಮುಕ್ತ ಮಂಚ ದ ಅಖಿಲ ಭಾರತ ಉಪಾಧ್ಯಕ್ಷರಾದ ಶ್ರೀಮತಿ ಸುಭಾಷಿಣಿ ಆಲಿ ಉದ್ಘಾಟಿಸಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಸಿಐಇಟು ಅಧ್ಯಕ್ಷೆ ವರಲಕ್ಷ್ಮಿ, ದಲಿತ ಹಕ್ಕುಗಳ ಸಮಿತಿ ಸಂಚಾಲಕ ಗೋಪಾಲಕೃಷ್ಣ, ಉಪಾಧ್ಯಕ್ಷ ನಾಗರಾಜು ಆಗಮಿಸಲಿದ್ದಾರೆ ಎಂದು ಹೇಳಿದರು. 26ರಂದು ರಾಜ್ಯದ 12 ಜಿಲ್ಲೆಗಳ 300 ಪ್ರತಿನಿಧಿಗಳ ಅಧಿವೇಶನ ನಡೆಯಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಟಿ.ವಿ. ರೇಣುಕ, ಚನ್ನಮ್ಮ, ರೇಣುಕಮ್ಮ, ಆನಂದರಾಜು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!