ಜೂನ್ 5ರ ಮಳೆಗೆ 6.90 ಲಕ್ಷ ರೂ.ನಷ್ಟ

ದಾವಣಗೆರೆ : ಜಿಲ್ಲೆಯಲ್ಲಿ ಜೂ.5ರಂದು 29.3 ಮಿ.ಮೀ. ಸರಾಸರಿ ಮಳೆಯಾಗಿದ್ದು 6.90 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ಚನ್ನಗಿರಿಯಲ್ಲಿ 23.2 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 16.4 ಮಿ.ಮೀ, ಹರಿಹರದಲ್ಲಿ 14.9 ಮಿ.ಮೀ, ಹೊನ್ನಾಳಿ 40.0 ಮಿ.ಮೀ, ಜಗಳೂರು 40.2 ಮಿ.ಮೀ, ನ್ಯಾಮತಿಯಲ್ಲಿ 40.6 ಮಿ.ಮೀ ಮಳೆೆಯಾಗಿದೆ.

ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 2 ಕಚ್ಚಾಮನೆ ಭಾಗಶ: ಹಾನಿಯಾಗಿದ್ದು, ರೂ. 0.60 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 1.50 ಲಕ್ಷ, 2 ಕಚ್ಚಾಮನೆ ಭಾಗಶ: ಹಾನಿಯಾಗಿದ್ದು, ರೂ. 1.00 ಲಕ್ಷ ಮತ್ತು ಒಂದು ದನದ ಕೊಟ್ಟಿಗೆ ಹಾನಿಯಾಗಿದ್ದು, ರೂ.0.50 ಲಕ್ಷ ಒಟ್ಟು ರೂ.3.00 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಕಚ್ಚಾಮನೆ ಭಾಗಶ: ಹಾನಿಯಾಗಿದ್ದು, ರೂ. 0.50 ಲಕ್ಷ ಮತ್ತು 0-10 ಗುಂಟೆ ಅಡಿಕೆ ಬೆಳೆ ಹಾನಿಯಾಗಿದ್ದು, ರೂ. 0.30 ಲಕ್ಷ ಒಟ್ಟು ರೂ. 0.80 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 7 ಕಚ್ಚಾಮನೆ ಭಾಗಶ: ಹಾನಿಯಾಗಿದ್ದು, ರೂ. 2.50 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಜಿಲ್ಲೆಯಲ್ಲಿ ಒಟ್ಟಾರೆ ರೂ. 6.90 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

garudavoice21@gmail.com 9740365719

Leave a Reply

Your email address will not be published. Required fields are marked *

error: Content is protected !!