ವಿಶ್ವಕರ್ಮ ಸಮುದಾಯ ಭವನ ಲೋಕಾರ್ಪಣೆ ಮಾಡಿದ ಮಾಜಿ ಸಿಎಂ ಬಿಎಸ್ವೈ

χ ಶಿಕಾರಿಪುರ :ನವರಾತ್ರಿಯ ಈ ಶುಭ ಸಮಯದಲ್ಲಿ ಎಲ್ಲರೂ ಕೆಟ್ಟ ಗುಣವನ್ನು ದೂರಮಾಡಿ ಸಮಾಜಕ್ಕೆ ಪೂರಕವಾದ ಕೆಲಸವನ್ನು ಮಾಡೋಣ ಸಂಸದ ರಾಘವೇಂದ್ರ.

ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ ನವರ ತವರು ಕ್ಷೇತ್ರ ಶಿಕಾರಿಪುರದಲ್ಲಿ ಇಂದು ವಿಶ್ವಕರ್ಮ ಸಮುದಾಯ ಭವನವನ್ನು ಲೋಕಾರ್ಪಣೆ ಮಾಡಲಾಯಿತು.

ಮಾಜಿ ಸಿಎಂ ಯಡಿಯೂರಪ್ಪ ಶಿಕಾರಿಪುರದವಿನಾಯಕ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿದ್ದ ವಿಶ್ವಕರ್ಮ ಸಮುದಾಯ ಭವನವನ್ನು ಲೋಕಾರ್ಪಣೆ ಮಾಡಿದರು.

ಇದೇ ವೇಳೆ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ರಾಘವೇಂದ್ರ 50 ಲಕ್ಷ ವೆಚ್ಚದಲ್ಲಿ ಶಿಕಾರಿಪುರದಲ್ಲಿ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಗಿದೆ, ಇದರ‌ ಸದುಪಯೋಗವನ್ನು ಸಮುದಾಯದವರು ಮಾಡಿಕೊಳ್ಳುವಂತೆ ಮನವಿ ಮಾಡಿದರು.

ಯಡಿಯೂರಪ್ಪನವರು ಪತ್ರಿಯೊಂದು ಸಮಾಜಕ್ಕೂ‌ ಭವನ ನಿರ್ಮಾಣಕ್ಕೆ ಅನುದಾನ ನೀಡಿ,ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದರು ನವರಾತ್ರಿ ಈ ಶುಭ ಸಮಯದಲ್ಲಿ ನಮ್ಮಲ್ಲಿರುವ ಕೆಟ್ಟ ಗುಣವನ್ನು ದೂರಮಾಡಿ ಸಮಾಜಕ್ಕೆ ಪೂರಕವಾದ ಕೆಲಸವನ್ನು ಮಾಡೋಣ ಎಂದು ತಿಳಿಸಿದರು.

ಹಿಂದು ಧರ್ಮಕ್ಕೆ ಅಪಾರ ಕೊಡುಗೆಯನ್ನು ವಿಶ್ವಕರ್ಮ ಸಮಾಜ ನಾಯಕರು ನೀಡಿದ್ದಾರೆ. ನಿಕಟ ಪೂರ್ವ ಮುಖ್ಯ ಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಎಲ್ಲಾ ಸಮಾಜದ ದೇವಸ್ಥಾನ ಮತ್ತು ಸಮುದಾಯ ಭವನಕ್ಕೆ ಹಣವನ್ನು ಕೊಡಿಸುವ ಕೆಲಸ ಮಾಡಿದ್ದಾರೆ ಎಂದು ಸಂಸದ ಬಿ. ವೈ ರಾಘವೇಂದ್ರ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ. ಶಿಕಾರಿಪುರ ಪುರಸಭೆ ಅಧ್ಯಕ್ಷೆಯಾದ ಲಕ್ಷ್ಮಿ ಮಹಾಲಿಂಗ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!