ದಾವಣಗೆರೆಯ ಸಂತೆಬೆನ್ನೂರಿನಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ
![](https://garudavoice.com/wp-content/uploads/2022/06/yoga-day-e1655553230554.jpg)
ದಾವಣಗೆರೆ : ಜೂ.21 ರಂದು ಬೆಳಿಗ್ಗೆ 5.30ಕ್ಕೆ ಪುಷ್ಕರಣೆ, ಸಂತೆಬೆನ್ನೂರು, ಚನ್ನಗಿರಿ ಇಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಜಿಲ್ಲಾ ಆಯಷ್ ಇಲಾಖೆ ದಾವಣಗೆರೆ ಭಾರತೀಯ ಪುರಾತತ್ವ ಇಲಾಖೆ, ಸ್ಮಾರ್ಟ್ಸಿಟಿ ಲಿ., ಹಾಗೂ ಜಿಲ್ಲಾ ಯೋಗ ಒಕ್ಕೂಟ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ಜಿಲ್ಲಾ ಪೋಲಿಸ್ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ತಾಲ್ಲೂಕು ಆಡಳಿತ ಚನ್ನಗಿರಿ, ರಾಜ್ಯ ಎನ್.ಸಿ.ಸಿ ಘಟಕ, ರಾಜ್ಯ ಎನ್.ಸಿ.ಸಿ ಘಟಕ, ಪ್ರಜಾಪಿತ ಬ್ರಹ್ಮಕುಮಾರೀಸ್, ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ, ಪತಂಜಲಿ ಯೋಗ ಸಮಿತಿ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಉದ್ಘಾಟಿಸುವರು.
ಚನ್ನಗಿರಿ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಕೆ.ಮಾಡಾಳ್ ವಿರೂಪಾಕ್ಷಪ್ಪ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಉಪಸ್ಥಿತಿರಾಗಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ, ಜಗಳೂರು ಕ್ಷೇತ್ರದ ಶಾಸಕ ಹಾಗೂ ಕನಾಟಕ ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ, ಮಾಯಕೊಂಡ ಕ್ಷೇತ್ರದ ಶಾಸಕ ಹಾಗೂ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಪ್ರೊ.ಎನ್.ಲಿಂಗಣ್ಣ , ಹಾಗೂ ಕರ್ನಾಟಕ ವಿಧಾನ ಪರಿಷತ್ನ ಸರ್ಕಾರಿ ಮುಖ್ಯ ಸಚೇತಕರಾದ, ವೈ.ಎ.ನಾರಾಯಣಸ್ವಾಮಿ ಪಾಲ್ಗೊಳ್ಳುವರು.
ಮುಖ್ಯ ಅತಿಥಿಗಳಾಗಿ ದಾವಣಗೆರೆ ದಕ್ಷಿಣ ವಿಧಾನ ಸಭೆ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ದಾವಣಗೆರೆ ಉತ್ತರ ವಿಧಾನ ಸಭೆ ಕ್ಷೇತ್ರದ ಶಾಸಕರಾದ ಎಸ್.ಎ ರವೀಂದ್ರನಾಥ್, ಹರಿಹರ ಕ್ಷೇತ್ರದ ಶಾಸಕರಾದ ಎಸ್.ರಾಮಪ್ಪ, ಹಾಗೂ ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ್, ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಮೋಹನ್ ಕುಮಾರ್ ಕೊಂಡಜ್ಜಿ, ಆರ್.ಶಂಕರ್, ಕೆ.ಪಿ.ನಂಜುಂಡಿ ವಿಶ್ವಕರ್ಮ, ಡಿ.ಎಸ್ ಅರುಣ್, ರವಿಕುಮಾರ್.ಎನ್, ಕೆ.ಎಸ್ ನವೀನ್, ಡಾ.ತೇಜಸ್ವಿನಿಗೌಡ, ಸಂತೇಬೆನ್ನೂರು ಗ್ರಾ.ಪಂ ಅಧ್ಯಕ್ಷರಾದ ಶಿಲ್ಪಮರುಳಸಿದ್ದೇಶ್ ಭಾಗವಹಿಸುವರು.
ಸರ್ಕಾರದ ಪ್ರಧಾನ ಕಾರ್ಯದರ್ಶಿ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿ.ಪಂ ಆಡಳಿತಾಧಿಕಾರಿಗಳಾದ ಎಸ್.ಆರ್, ಉಮಾಶಂಕರ್, ಆಯುಷ್ ಇಲಾಖೆಯ ಆಯುಕ್ತರಾದ ರಾಮಚಂದ್ರ, ಪೂರ್ವವಲಯದ ಪೊಲೀಸ್ ಮಹಾನಿರೀಕ್ಷಕರಾದ ಡಾ.ಕೆ.ತ್ಯಾಗರಾಜನ್ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ ಚೆನ್ನಪ್ಪ, ಜಿಲ್ಲಾ ಆಯುಷ್ ಅಧಿಕಾರಿ ಹಾಗೂ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿವರ್ಗದವರು ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.
garudavoice21@gmail.com 9740365719