ದಾವಣಗೆರೆ ಜಿಲ್ಲೆಯ‌ ಕೊವಿಡ್ ವಾರ್ ರೂಂ ಮಾಹಿತಿ ಪಡೆದ ಸಂಸದ

mp gm siddeshwar visit war room garudavoice news

ದಾವಣಗೆರೆ: ದಾವಣಗೆರೆ ನಗರದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿರುವ ಕೋವಿಡ್ ವಾರ್ ರೂಂ ಗೆ ಸಂಸದ ಡಾ. ಜಿ.ಎಂ.ಸಿದ್ದೇಶ್ವರ ರವರು ಭೇಟಿ ನೀಡಿ ಪರಿಶೀಲಿಸಿದರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಚರ್ಚಿಸಿ, ವಾರ್ ರೂಂ ನಲ್ಲಿ ಸಿಬ್ಬಂದಿ ಜೊತೆ ಮಾತನಾಡಿ ಯಾವ ರೀತಿ ಕೆಲಸ ನಡೆಯುತ್ತದೆ ಎಂಬ ಮಾಹಿತಿಯನ್ನು ಪಡೆದರು.

ಈ ಸಂದರ್ಭದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಶಾಸಕರಾದ ಎಸ್.ವಿ.ರಾಮಚಂದ್ರಪ್ಪ, ನಿಕಟಪೂರ್ವ ಬಿಜೆಪಿ ಜಿಲ್ಲಾಧ್ಯಕ್ಷರಾದ ಯಶವಂತ ಜಾಧವ್, ಜಿಲ್ಲಾಧಿಕಾರಿಗಳಾದ ಮಹಾಂತೇಶ್ ಬೀಳಗಿ, ಜಿಲ್ಲಾ ಪಂಚಾಯತ್ ಸಿ.ಇ.ಓ. ವಿಜಯ್ ಮಹಾಂತೇಶ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಾದ ಹನುಮಂತರಾಯಪ್ಪ, ಅಧಿಕಾರಿಗಳು, ವೈದ್ಯಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!