ಯುದ್ದದ ನಾಡು ಉಕ್ರೇನ್‌ನಿಂದ ವಾಪಾಸ್ಸಾದವರಿಗೆ ಬಸ್ಸಲ್ಲಿ ಉಚಿತ ಪ್ರಯಾಣ

16

ಬೆಂಗಳೂರು : ಯುದ್ಧದ ನಾಡು ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕದ ವಿದ್ಯಾರ್ಥಿಗಳು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ವಿದ್ಯಾರ್ಥಿಗಳು ಅವರ ಪ್ರದೇಶಗಳಿಗೆ ಕೆಎಸ್‌ಆರ್‌ಟಿಸಿ ಬಸ್ಸಲ್ಲಿ ಉಚಿತವಾಗಿ ಸಂಚಾರ ನಡೆಸಲು ಅವಕಾಶ ಮಾಡಿಕೊಡಲಾಗಿದೆ. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದ ವಿಮಾನ ನಿಲ್ದಾಣದೊಳಗಿನ ನೋಡೆಲ್ ಅಧಿಕಾರಿಗಳು, ರಸ್ತೆ ಸಾರಿಗೆ ಸಂಸ್ಥೆಯ ಸಂಬAಧಪಟ್ಟ ಅಧಿಕಾರಿಗಳು ಸಮನ್ವಯ ಸಾಧಿಸುವ ಮೂಲಕ ಇದನ್ನು ಕಾರ್ಯರೂಪಕ್ಕೆ ತರಬೇಕು ಎಂದು ಸೂಚನೆ ನೀಡಿದ್ದಾರೆ. ವಿಶೇಷವಾಗಿ ವಿದ್ಯಾರ್ಥಿ ಸಮುದಾಯದ ಪರಿಸ್ಥಿತಿ ಗಮನಿಸಿ ಕೆಎಸ್‌ಆರ್‌ಟಿಸಿ ಈ ಕುರಿತು ತೀರ್ಮಾನ ಕೈಗೊಂಡಿದೆ. ಕರ್ನಾಟಕದ ಹತ್ತಿರದ ವಿಮಾನ ನಿಲ್ದಾಣದಿಂದ ರಾಜ್ಯದೊಳಗಿನ ಅವರ ಸ್ಥಳೀಯ ಸ್ಥಳಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
ಶನಿವಾರ ಏರ್ ಇಂಡಿಯಾ ವಿಮಾನದಲ್ಲಿ ಮುಂಬೈಗೆ ಆಗಮಿಸಿದ್ದ ರಾಜ್ಯದ 12 ವಿದ್ಯಾರ್ಥಿಗಳು ಭಾನುವಾರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟಿçÃಯ ವಿಮಾನ ನಿಲ್ದಾಣ ತಲುಪಿದರು. ಈ ವಿದ್ಯಾರ್ಥಿಗಳನ್ನು ಕಂದಾಯ ಸಚಿವ ಆರ್. ಅಶೋಕ ಸೇರಿದಂತೆ ವಿವಿಧ ನಾಯಕರು ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು. ನವೆದೆಹಲಿಗೆ ಆಗಮಿಸಿದ ವಿದ್ಯಾರ್ಥಿಗಳ ವಾಸ್ತವ್ಯಕ್ಕೆ ಕರ್ನಾಟಕ ಭವನದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿಂದ ಅವರು ಬೆಂಗಳೂರಿಗೆ ಆಗಮಿಸಲು ಟಿಕೆಟ್ ಬುಕ್ ಮಾಡಿಕೊಡಲಾಯಿತು. ಬೆಂಗಳೂರು ನಗರದ 135 ವಿದ್ಯಾರ್ಥಿಗಳು ಸೇರಿದಂತೆ ಕರ್ನಾಟಕದ 406 ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿದ್ದಾರೆ. ಇದುವರೆಗೆ 30 ವಿದ್ಯಾರ್ಥಿಗಳನ್ನು ಮಾತ್ರ ರಕ್ಷಣೆ ಮಾಡಲಾಗಿದೆ. ಸರ್ಕಾರ ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರಿಗೆ ನೆರವು ನೀಡಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಆರ್. ಮನೋಜ್ ರಂಜನ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿದೆ. ವಿವಿಧ ಜಿಲ್ಲೆಗಳಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದೆ. ಪೋಷಕರು ಸಹಾಯವಾಣಿಯನ್ನು ಸಂಪರ್ಕಿಸಿ ತಮ್ಮ ಮಕ್ಕಳು ಉಕ್ರೇನ್‌ನಲ್ಲಿ ಸಿಲುಕಿದ್ದರೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. “ಯುದ್ಧದ ಪರಿಸ್ಥಿತಿ ತಿಳಿಗೊಳ್ಳುವ ತನಕ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡುವ ಜೊತೆಗೆ ಅವರನ್ನು ಭಾರತಕ್ಕೆ ಕರೆತರುವ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ರಾಜ್ಯದ ಅಧಿಕಾರಿಗಳು ಈ ನಿಟ್ಟಿನಲ್ಲಿ ನಿರಂತರವಾಗಿ ಸಂಪರ್ಕದಲ್ಲಿ ಇದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!