ಕೇಂದ್ರದ ವೇತನ ಶ್ರೇಣಿಗೆ ರಾಜ್ಯದ ವೇತನ ಶ್ರೇಣಿ ಹೋಲಿಸುವ ಪ್ರಶ್ನೆಯೇ ಇಲ್ಲ : ಬಸವರಾಜ್ ಬೊಮ್ಮಾಯಿ

bommay

ದಾವಣಗೆರೆ : ಕೇಂದ್ರ ಸರ್ಕಾರದ ಹುದ್ದೆ ಮತ್ತು ಹುದ್ದೆಗಳಿಗೆ ನಿಗಧಿಪಡಿಸಿರುವ ವೇತನ ಶ್ರೇಣಿ ಮತ್ತು ಭತ್ಯೆಗಳನ್ನು ರಾಜ್ಯ ಸರ್ಕಾರದ ಹುದ್ದೆಗಳಿಗೆ ಅನ್ವಯಿಸಿ ಹೋಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ವಿಧಾನಸಭಾ ಕಲಾಪದಲ್ಲಿ ವಿಧಾನಸಭೆ ಸದಸ್ಯ ಡಾ. ಅಜಯ್ ಧರ್ಮಸಿಂಗ್ (ಜೇವರ್ಗಿ) ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.  ವಿಧಾನಸಭೆ ಸದಸ್ಯ ಡಾ. ಅಜಯ್ ಧರ್ಮಸಿಂಗ್ ವಿಧಾನಸಭೆ ಕಲಾಪದಲ್ಲಿ ” ರಾಜ್ಯ ಸರ್ಕಾರಿ ನೌಕರರು ಹಾಗೂ ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ವ್ಯತ್ಯಾಸವಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ವೇತನ ನೀಡುವಲ್ಲಿ ತಾರತಮ್ಯವಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ.? ಬಂದಿದ್ದಲ್ಲಿ ಕೇಂದ್ರ ಸರ್ಕಾರಿ ನೌಕರರ ಸಮಾನ ವೇತನವನ್ನು ರಾಜ್ಯ ಸರ್ಕಾರಿ ನೌಕರರಿಗೂ ನೀಡಲು ಸರ್ಕಾರ ಕ್ರಮ ಕೈಗೊಳ್ಳುವುದೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಿಎಂ ರಾಜ್ಯ ಸರ್ಕಾರವು ಸಾಂಪ್ರದಾಯಿಕವಾಗಿ ಕೇಂದ್ರ ವೇತನ ಆಯೋಗಗಳ ಶಿಫಾರಸ್ಸು ಹಾಗೂ ಕೇಂದ್ರ ವೇತನ ಪರಿಷ್ಕರಣೆಯ ಅವಧಿಯನ್ನು ಅನುಸರಿಸದೇ ತನ್ನದೇ ಆದ ವೇತನ ಆಯೋಗ/ವೇತನ ಸಮಿತಿಗಳ ಶಿಫಾರಸ್ಸಿನ ಮೇರೆಗೆ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ತುಟ್ಟಿಭತ್ಯೆಯೂ ಸೇರಿದಂತೆ ಇತರೆ ಭತ್ಯೆಗಳನ್ನು ಕಾಲದಿಂದ ಕಾಲಕ್ಕೆ ಪರಿಷ್ಕರಿಸಿಕೊಂಡು ಬರಲಾಗಿರುತ್ತದೆ.

ಇದು ಸರ್ಕಾರದ ನೀತಿಯಾಗಿರುತ್ತದೆ. ಕೇಂದ್ರ ಸರ್ಕಾರದ ನಿಯಮಗಳು ಮತ್ತು ಕೇಂದ್ರ ವೇತನ ಆಯೋಗದ ಶಿಫಾರಸ್ಸುಗಳು ರಾಜ್ಯ ಸರ್ಕಾರದ ನೌಕರರಿಗೆ ಅನ್ವಯಿಸುವುದಿಲ್ಲ. ಆದ್ದರಿಂದ ಕೇಂದ್ರ ಸರ್ಕಾರದ ಹುದ್ದೆ ಮತ್ತು ಹುದ್ದೆಗಳಿಗೆ ನಿಗಧಿಪಡಿಸಿರುವ ವೇತನ ಶ್ರೇಣಿ ಮತ್ತು ಭತ್ಯೆಗಳನ್ನು ರಾಜ್ಯ ಸರ್ಕಾರದ ಹುದ್ದೆಗಳಿಗೆ ಅನ್ವಯಿಸಿ ಹೋಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಉತ್ತರಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!