ಕಾಡಾನೆ ದಾಳಿ: ಚಿಂತಾಜನಕ ಸ್ಥಿತಿಯಲ್ಲಿ ಯುವಕ

5

ಸುಬ್ರಹ್ಮಣ್ಯ : ಯುವಕನೋರ್ವನ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಯುವಕನ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಇಲ್ಲಿನ ಕೊಲ್ಲಮೊಗ್ರ ಎಂಬಲ್ಲಿ ಭಾನುವಾರ ಮುಂಜಾನೆ ಈ ಘಟನೆ ನಡೆದಿದೆ. ಗಾಯಗೊಂಡ ಯುವಕನನ್ನು ಕೋನಡ್ಕ ನಿವಾಸಿ ಗುರುಪ್ರಸಾದ್ (21) ಎಂದು ಗುರುತಿಸಲಾಗಿದೆ. ಈತ ಎಂದಿನಂತೆ ಡೈರಿಗೆ ಹಾಲು ಹಾಕಲು ಬೈಕಿನಲ್ಲಿ ತೆರಳುತ್ತಿದ್ದ ವೇಳೆ ದಿಢೀರ್ ಪ್ರತ್ಯಕ್ಷಗೊಂಡ ಆನೆ ಅಡ್ಡ ಬಂದು ಯುವಕನ ಮೇಲೆ ದಾಳಿ ನಡೆಸಿದೆ. ಪರಿಣಾಮ ಬೈಕ್‌ನಿಂದ ಕೆಳಗೆ ಬಿದ್ದಿದ್ದ ಯುವಕನನ್ನು ಆನೆಯು 50 ಮೀ. ದೂರದವರೆಗೆ ಸೊಂಡಿಲಿನ ಸಹಾಯದಿಂದ ಎಳೆದುಕೊಂಡು ಹೋಗಿದೆ. ಈ ಸಂದರ್ಭ ಅಡಿಕೆ ಕೀಳಲು ಹೋಗುತ್ತಿದ್ದ ಕಾರ್ಮಿಕರೊಬ್ಬರು ದೂರದಿಂದ ನೋಡಿ ಜೋರಾಗಿ ಕಿರುಚಾಡಿದ್ದು ಈ ವೇಳೆ ಸ್ಥಳೀಯರು ಓಡಿ ಬಂದಿದ್ದಾರೆ. ಈ ವೇಳೆ ಆನೆಯು ಯುವಕನನ್ನು ಬಿಟ್ಟು ಕಾಡಿನತ್ತ ಸಂಚರಿಸಿದೆ. ಸ್ಥಳೀಯರು ಗಾಯಾಳುವನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!