ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ರಸ್ತೆ ಅಪಘಾತ! ಬೈಕ್ ಸವಾರ ಸ್ಥಳದಲ್ಲೇ ಸಾವು

ದಾವಣಗೆರೆ : ದಾವಣಗೆರೆ ತಾಲೂಕಿನ ಹೆಬ್ಬಾಳು ಗ್ರಾಮದ ಶಿವ ಡಾಬಾದ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ರಸ್ತೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತಪಟ್ಟ ಬೈಕ್ ಸವಾರ ಕೇರನಹಳ್ಳಿ ಹುಣಸೆಕಟ್ಟೆ ಬಸವರಾಜಪ್ಪ ಎಂದು ಗುರುತಿಸಲಾಗಿದೆ. ಈ ಅವಘಡದ ನಂತರ ಬಸ್ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ. ಕೆ.ಎ.-17,ಎಫ್-1922 ಸಂಖ್ಯೆಯ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘೌತ ನಡೆದಿದೆ ಎಂದು ತಿಳಿದುಬಂದಿದೆ.