ಎಸ್.ಎಸ್.ಮಲ್ಲಿಕಾರ್ಜುನ್ ನಿವಾಸದಲ್ಲಿ ಎಸ್ ಎಸ್ ರಿಂದ ಬಸವ ಜಯಂತಿ ಆಚರಣೆ

Basava jayanthi celebration at ssm ss house

 

ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಸಚಿವರು, ಹಾಲಿ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅವರ ಪುತ್ರ ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ಇಂದು ಬಸವ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಪ್ರತಿವರ್ಷವೂ ಬಸವ ಜಯಂತಿಯಂದು ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಕುಟುಂಬದವರು ಎತ್ತುಗಳಿಗೆ ಪೂಜೆ ಮಾಡುವ ಮೂಲಕ ಬಸವ ಜಯಂತಿಯನ್ನು ಆಚರಿಸುತ್ತಾ ಬಂದಿದ್ದು, ಇಂದು ದುಗ್ಗಾವತಿಯಲ್ಲಿ ಸಾಕಿರುವ ಕಿಲಾರಿ ಎತ್ತುಗಳಿಗೆ ಮಾಜಿ ಸಚಿವರು, ಹಾಲಿ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು, ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಮತ್ತವರ ಪತ್ನಿ ಶ್ರೀಮತಿ ಪ್ರಭಾ ಎಸ್.ಮಲ್ಲಿಕಾರ್ಜುನ್, ಪುತ್ರ ಸಮರ್ಥ, ಪುತ್ರಿ ಶ್ರೇಷ್ಠ, ಪುತ್ರ ಶಿವ ಅವರು ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಡಾ|| ಉದಯಶಂಕರ್, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಜಿ.ಎಸ್.ಮಂಜುನಾಥ್, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿ.ಕರಿಬಸಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಗಾನಹಳ್ಳಿ ಪರಶುರಾಮ್, ಕಾಡಜ್ಜಿ ಚಂದ್ರಣ್ಣ, ಹನುಮಂತರಾವ್ ಮತ್ತಿತರರಿದ್ದರು.

garudavoice21@gmail.com 9740365719

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!