ಮೇ.15ರಂದು ಜಿಲ್ಲಾ ಮಟ್ಟದ ಚದುರಂಗ (ಚೆಸ್) ಸ್ಪರ್ಧೆ

ದಾವಣಗೆರೆ : ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿರುವ ಶ್ರೀ ಶಾಮನೂರು ಶಿವಶಂಕರಪ್ಪ ಜಿಲ್ಲಾ ಕಾಂಗ್ರೆಸ್ ಸಮುದಾಯ ಭವನದಲ್ಲಿ ಮೇ.15ರ ಭಾನುವಾರದಂದು ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷರಾದ ದಿನೇಶ್ ಕೆ. ಶೆಟ್ಟಿ ತಿಳಿಸಿದರು. ಹದಿನಾರು ವರ್ಷದೊಳಗಿನ ಮಕ್ಕಳಿಗೆ ದಾವಣಗೆರೆ ಜಿಲ್ಲಾ ಚೆಸ್ ಅಸೋಸಿಯೇಶನ್ ವತಿಯಿಂದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಏರ್ಪಡಿಸಲಾಗಿದೆ. ಈ ಸ್ಪರ್ಧೆಯು ಸ್ವಿಸ್ ಲೀಗ್ ಮಾದರಿಯಲ್ಲಿ ನಡೆಯಲಿದ್ದು ಲೀಗ್ನಲ್ಲಿ 7 ಸುತ್ತುಗಳು ನಡೆಯಲಿವೆ. ಭಾಗವಹಿಸಿದ ಎಲ್ಲಾ ಸ್ಪರ್ಧಾಳುಗಳು 7 ಸುತ್ತುಗಳಲ್ಲಿ ಆಡಲಿದ್ದಾರೆ.
ಪಂದ್ಯಾವಳಿ ಸಂಜೆ 5 ಗಂಟೆಗೆ ಮುಕ್ತಾಯಗೊಳ್ಳಲಿದ್ದು ಸಂಜೆ 5ಕ್ಕೆ ಸಂಘದ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ ಹಾಗೂ ಮಾಜಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರಾದ ಎ. ನಾಗರಾಜ್ ಬಹುಮಾನ ವಿತರಣೆ ಮಾಡಲಿದ್ದಾರೆ ಎಂದು ಸಂಘದ ಕಾರ್ಯದರ್ಶಿಯಾದ ಯುವರಾಜ್ ತಿಳಿಸಿದರು. ಈ ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ ಹತ್ತು ಸ್ಥಾನಗಳಿಗೆ ಟ್ರೋಫಿ ಮತ್ತು ನಗದು ಬಹುಮಾನವನ್ನು ಹಾಗೂ 8 ವರ್ಷದ ಮಕ್ಕಳಿಗೆ 10 ವರ್ಷದ ಮಕ್ಕಳಿಗೆ 12 ವರ್ಷದ ಮಕ್ಕಳಿಗೆ ತಲಾ 5 ವಿಶೇಷ ಬಹುಮಾನವನ್ನು ಪಂದ್ಯಾವಳಿಯಲ್ಲಿ ಭಾಗವಹಿಸುವ ಎಲ್ಲ ಸ್ಪರ್ಧಾಳುಗಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಗುವುದು ಎಂದು ಜಂಟಿ ಕಾರ್ಯದರ್ಶಿಗಳಾದ ಮಂಜು ಸ್ವರಾಜ್ ತಿಳಿಸಿದರು. ಸ್ಪರ್ಧೆಗೆ ಭಾಗವಹಿಸುವರು ದಿನಾಂಕ 15ರ ಭಾನುವಾರ ಬೆಳಗ್ಗೆ ಹತ್ತು ಗಂಟೆಯ ಒಳಗೆ ಹೆಸರನ್ನು ನೋಂದಾಯಿಸಬೇಕಾಗಿ ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಘದ ಕಾರ್ಯದರ್ಶಿ ಯುವರಾಜ್ 9945613469, ಮಂಜುಳಾ ಯುವರಾಜ್ 7259310197 ಅವರನ್ನು ಸಂಪರ್ಕಿಸಲು ತಿಳಿಸಿದ್ದಾರೆ.