ನಿರಂತರ ಜ್ಯೋತಿ ಯೋಜನೆಯಡಿಯಲ್ಲಿನ ಅವ್ಯವಹಾರ ತನಿಖೆಗೆ ಮನವಿ

ದಾವಣಗೆರೆ : ನಿರಂತರ ಜ್ಯೋತಿ ಯೋಜನೆಯಡಿಯಲ್ಲಿ ನಡೆದಿರುವ ಕೋಟ್ಯಾಂತರ ರೂಗಳ ಅವ್ಯವಹಾರದ ಬಗ್ಗೆ ಸೂಕ್ತ ತನಿಖೆ ನಡೆಸಲು ಕೆ. ಬೇವಿನಹಳ್ಳಿ ಮಹೇಶ್ ಹರಿಹರಕ್ಕೆ ಆಗಮಿಸಿದ್ದ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನೀಲ್ ಕುಮಾರ್ಗೆ ಮನವಿ ಮಾಡಿದ್ದಾರೆ.
2016-17, 2017-18ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲೆ ಹರಿಹರ ಬೆಸ್ಕಾಂ ವಿಭಾಗಕ್ಕೆ ಸಂಬ0ಧಪಟ್ಟ0ತೆ ಹರಿಹರ, ಹೊನ್ನಾಳಿ, ಹರಪನಹಳ್ಳಿ ತಾಲೂಕುಗಳಲ್ಲಿ ನಿರಂತರ ಜ್ಯೋತಿ ಯೋಜನೆಯಡಿಯಲ್ಲಿ ನಡೆದಿರುವ ಕೋಟ್ಯಾಂತರ ಅವ್ಯವಹಾರದ ನಂತರ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲೂ ದೊಡ್ಡ ಪ್ರಮಾಣದಲ್ಲಿ ಅವ್ಯವಹಾರ ನಡೆದಿದೆ ಎನ್ನಲಾಗಿದೆ.
ಹರಿಹರ ತಾಲೂಕಿನ ಎಳೆಹೊಳೆ ಫೀಡರ್ ಮತ್ತು ದೀಟೂರು ಫೀಡರ್ ಸಮಗ್ರವಾಗಿ ತನಿಖೆ ನಡೆಸಿದರೆ ರಾಜ್ಯದ ಬೆಸ್ಕಾಂ ಇಲಾಖೆಯಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ಮಾಹಿತಿ ಹೊರಬೀಳುವುದು. ಈ ಬಗ್ಗೆ ಬೆಸ್ಕಾಂ ಅಧಿಕಾರಿಗಳಿಗೆ ಹಲವು ಬಾರಿ ಪತ್ರ ಬರೆದಿದ್ದರೂ ಸಹ ಕಾಲ ವಿಳಂಬ ಮಾಡಿ ತನಿಖೆ ಕೈಗೊಳ್ಳದೆ ಸುಳ್ಳು ಮಾಹಿತಿಗಳನ್ನು ನೀಡಿ ಪ್ರಕರಣ ಮುಚ್ಚುವ ಹುನ್ನಾರ ನಡೆಸುತ್ತಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಸಮಗ್ರವಾಗಿ ತನಿಖೆ ಕೈಗೊಂಡರೆ ಸರ್ಕಾರಕ್ಕೆ ಆಗಿರುವ ಕೋಟ್ಯಾಂತರ ರೂಗಳ ಅವ್ಯವಹಾರವನ್ನು ಬೆಳಕಿಗೆ ತರಬಹುದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.