ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಕೈಗಾರಿಕೆಗಳಲ್ಲಿ ವಿಪುಲ ಅವಕಾಶಗಳಿವೆ: ಡಾ ಬಿ.ಆರ್. ಶ್ರೀಧರ್

ದಾವಣಗೆರೆ: ನಗರದ ಜಿಎಂಐಟಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿಂದು ನಾಲ್ಕು ದಿನದ “ಕೈಗಾರಿಕಾ ಕೌಶಲ್ಯತೆಗಳು” ತರಬೇತಿ ಕಾರ್ಯಕ್ರಮವನ್ನು ನಡೆಸಲಾಯಿತು. ಈ ತರಬೇತಿ ಕಾರ್ಯಕ್ರಮವು ಅಂತಿಮ ವರ್ಷದ ಡಿಪ್ಲೋಮೋ ವಿದ್ಯಾರ್ಥಿಗಳಿಗಾಗಿದ್ದು, ಪುಣೆ ಮೂಲದ ರುಬಿಕಾನ್ ಸ್ಕಿಲ್ ಡೆವಲಪ್ಮೆಂಟ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಉದ್ಯಮ ತಜ್ಞ ತರಬೇತುದಾರರುಗಳಾಗಿ ಹಿಮಾಂಶು ಯು ಮತ್ತು ಡಕಾರ್ಲಿನ್ ವಿದ್ಯಾರ್ಥಿಗಳನ್ನು ಕೈಗಾರಿಕೆಗಳಿಗೆ ತಕ್ಕಂತೆ ತರಬೇತಿಗೊಳಿಸುವ ಜವಾಬ್ದಾರಿಯನ್ನು ಹೊತ್ತಿದ್ದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ ಬಿ ಆರ್ ಶ್ರೀಧರ್, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಕೈಗಾರಿಕೆಗಳಲ್ಲಿ ವಿಪುಲ ಅವಕಾಶಗಳಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆಕೊಟ್ಟರು. ಸಂದರ್ಶನಕ್ಕೆ ಬೇಕಾದ ಎಲ್ಲಾ ರೀತಿಯ ನೈಪುಣ್ಯತೆಯನ್ನು ಹೊಂದಿರಬೇಕು ಮತ್ತು ತಾಂತ್ರಿಕ ಜ್ಞಾನ ಮತ್ತು ಚಟುವಟಿಕೆಗಳಲ್ಲೂ ಮುಂದಿರಬೇಕು. ಅಂತಹ ವಿದ್ಯಾರ್ಥಿಗಳಿಗೆ ಕೈಗಾರಿಕೆಗಳ ಬಾಗಿಲು ತೆರೆದಿದ್ದು ಸಾಕಷ್ಟು ಅವಕಾಶಗಳನ್ನು ಗಿಟ್ಟಿಸಿಕೊಳ್ಳಬಹುದು ಆಗಿದೆ ಎಂದು ತಿಳಿಸಿದರು.
ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ.ಆರ್ ಮಾತನಾಡಿ, ಜೂನ್ 17ನೇ ತಾರೀಖಿನಂದು ಕಾಲೇಜಿನ ಆವರಣದಲ್ಲಿ ಉದ್ಯೋಗ ಮೇಳ ನಡೆಸುತ್ತಿದ್ದು, ಸುತ್ತಮುತ್ತಲಿನ ಎಲ್ಲಾ ಡಿಪ್ಲೋಮೋ ಕಾಲೇಜಿನ ವಿದ್ಯಾರ್ಥಿಗಳನ್ನು ಆಹ್ವಾನಿಸಿ ಉದ್ಯೋಗ ನೀಡುವ ಮಹತ್ವದ ಕಾರ್ಯವನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಎಂಐಟಿ ಗಣಕಯಂತ್ರ ವಿಭಾಗದ ಮುಖ್ಯಸ್ಥರಾದ ಡಾ ಸಂಜಯ್ ಪಾಂಡೆ, ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ.ಆರ್, ಪ್ರಾಧ್ಯಾಪಕರಾದ ಪ್ರವೀಣ್ ಕುಮಾರ್, ಸಂತೋಷ್ ಕುಮಾರ್, ಸೋಮಶೇಖರ ಎಸ್, ನಿಂಗರಾಜು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
garudavoice21@gmal.com 9740365719