ಶಿಶುಪಾಲನ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆ

ದಾವಣಗೆರೆ : ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಂಡಳಿ ಮತ್ತು ಮಿರಬೋ ಗ್ಲೋಬಲ್ ಪೌಂಡೇಷನ್ ಇವರ ವತಿಯಿಂದ ನಗರದ ರಾಜೇಶ್ವರಿ ಬಡಾವಣೆ ನಿಟುವಳ್ಳಿಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಶಿಶುಪಾಲನಾ ಕೇಂದ್ರದಲ್ಲಿ ದಾಖಲಾಗಿರುವ ಕಾರ್ಮಿಕರ ಮಕ್ಕಳಿಗೆ ಇಂದು ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು… ಈ ಕಾರ್ಯಕ್ರಮದಲ್ಲಿ 35ನೇ ವಾರ್ಡಿನ ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀಮತಿ ಸವಿತಾ ಗಣೇಶ್ರವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಶಿಶುಪಾಲನ ಕೇಂದ್ರದ ಮಕ್ಕಳಿಗೆ ಸಮವಸ್ತ್ರಗಳನ್ನು ವಿತರಿಸಿದರು. ಈ ವೇಳೆ ಶಿಶುಪಾಲನ ಕೇಂದ್ರದ ಶಿಕ್ಷಕಿ ಶ್ರೀಮತಿ ಸರಸ್ವತಿ ಸಹಾಯಕಿಯಾದ ಶ್ರೀಮತಿ ರೇಣುಕಾ ಹಾಗೂ ಮಕ್ಕಳ ಪೋಷಕರು ಹಾಜರಿದ್ದರು.
garudavoice21@gmail.com 9740365719