ಕನ್ನಡ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ :ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 2022-23 ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
2022 ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಸೆಪ್ಟೆಂಬರ್ 15 ರವರೆಗೆ ದಂಡ ಶುಲ್ಕ ರೂ.50 ನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು. ರೂ. 25 ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆ(ಬೆಂಗಳೂರು) ಇಲ್ಲಿ ಪಡೆಯಬಹುದು.
2022 ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಸೆಪ್ಟೆಂಬರ್ 15 ರವರೆಗೆ ದಂಡ ಶುಲ್ಕ ರೂ.50 ನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು. ರೂ. 25 ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆ(ಬೆಂಗಳೂರು) ಇಲ್ಲಿ ಪಡೆಯಬಹುದು.
ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಲಾಗುವುದು. ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದುಕೊಳ್ಳಬಹುದಾಗಿದೆ. ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.25 ಗಳನ್ನು ಪ್ರತ್ಯೇಕವಾಗಿ ಪಾವತಿಸುವುದು.
ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18, ದೂರವಾಣಿ ಸಂಖ್ಯೆ 080-26623584, 26612991, 22423867, 26672992, 8660777643 ನ್ನು ಸಂಪರ್ಕಿಸಬಹುದು ಎಂದು ಪರಿಷತ್ತಿನ ಗೌರವ ಕಾರ್ಯದರ್ಶಿ ನೇ.ಭ.ರಾಮಲಿಂಗಶೆಟ್ಟಿ ತಿಳಿಸಿದ್ದಾರೆ.