ಮಾಜಿ ಸಿಎಂ ಸಿದ್ದರಾಮಯ್ಯ ಅಮೃತಮಹೊತ್ಸವ.! ದಾವಣಗೆರೆಯಲ್ಲಿ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ದಿಗ್ಗಜರು

amrutha mahothsava

ದಾವಣಗೆರೆ : ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಸುಮಾರು 10 ಲಕ್ಷ ಜನರನ್ನ ಸೇರಿಸುವ ಗುರಿ ಹೊಂದಲಾಗಿದೆ ಎಂದು ಹಿಂದುಳಿದ ವರ್ಗಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕೆ ಎಂ ರಾಮಚಂದ್ರಪ್ಪ ತಿಳಿಸಿದ್ದಾರೆ. ನಗರದ ಬೀರಲಿಂಗೇಶ್ವರ ಭವನದಲ್ಲಿ ದಾವಣಗೆರೆ ಜಿಲ್ಲೆಯ ಸಿದ್ದರಾಮಯ್ಯನವರ ಅಭಿಮಾನಿಗಳು ಅಹಿಂದ ಮುಖಂಡರು ಹಾಗೂ ಸಮಾಜದ ಎಲ್ಲಾ ಸಮುದಾಯಗಳ ಮುಖಂಡರು ಸೇರಿದ್ದ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಿದ್ದರಾಮಯ್ಯನವರು ಕಳೆದ ಐದು ವರ್ಷಗಳ ಆಡಳಿತದಲ್ಲಿ ನಾಡಿನ ಶೋಷಿತ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ತುಳಿತಕ್ಕೆ ಒಳಗಾದ ಸಮಾಜಗಳನ್ನು ಮೆಲೇತ್ತುವ ಪ್ರಯತ್ನ ಮಾಡಿದ್ದಾರೆ.

ಹೀಗಾಗಿ ರಾಜ್ಯದ ಎಲ್ಲಾ ಶೋಷಿತ ಸಮಾಜಗಳು ಅವರ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಅವರಿಗೆ ಕೃತಜ್ಞತೆ ಸಲ್ಲಿಸುವ ಕೆಲಸವಾಗುತ್ತದೆ. ದಾವಣಗೆರೆಯಲ್ಲಿ ಈ ಕಾರ್ಯಕ್ರಮ ನಡೆಯುವುದರಿಂದ ಊಟ ಮತ್ತು ವಸತಿ ಸೇರಿದಂತೆ ಕಾರ್ಯಕ್ರಮದ ಬಗ್ಗೆ ಮುತವರ್ಜಿ ವಹಿಸಬೇಕೆಂದು ಮನವಿ ಮಾಡಿದರು. 150 ಕಿ.ಮೀ ವ್ಯಾಪ್ತಿಯಲ್ಲಿ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗುತ್ತದೆ ಈ ಸಂದರ್ಭದಲ್ಲಿ ಹೆಚ್ಚು ಜನರನ್ನು ಕಾರ್ಯಕ್ರಮಕ್ಕೆ ತರುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಾಮಪ್ಪ ನಾಡಿನಾದ್ಯಂತ ಜನರು ಸಿದ್ದರಾಮಯ್ಯನವರ ಅಭಿಮಾನಿಗಳು ಇದ್ದಾರೆ ಮತ್ತು ಐದು ವರ್ಷಗಳ ಅವರ ಆಡಳಿತದಲ್ಲಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಒದಗಿಸಿದ್ದಾರೆ ಹೀಗಾಗಿ ಸಿದ್ದರಾಮಯ್ಯನವರ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಜನರನ್ನು ಸೇರಿಸುವ ಕೆಲಸ ಆಗಬೇಕು ನಾವು ಹರಿಹರದಿಂದ ಸಹಸ್ರಾರು ಸಂಖ್ಯೆಯಲ್ಲಿ ಕರೆತರುತ್ತೇವೆ ಎಂದರು. ಇದೇ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಮಾತನಾಡಿದ ಸಿದ್ದರಾಮಯ್ಯನವರು ಈ ರಾಜ್ಯದ ಆಸ್ತಿ ಅವರು ಅವರ ಬಳಿ ಸಹಾಯ ಪಡೆಯದವರೆ ಇಲ್ಲ ನನ್ನನ್ನು ಎರಡು ಬಾರಿ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದ್ದು ಸಿದ್ದರಾಮಯ್ಯನವರೇ.

ಅವರ ಅಮೃತ ಮಹೋತ್ಸವ ನಮ್ಮ ದಾವಣಗೆರೆಯಲ್ಲಿ ನಡೆಯುತ್ತಿರುವುದು ನಮ್ಮ ಪುಣ್ಯ ಹೀಗಾಗಿ ಈ ಕಾರ್ಯಕ್ರಮವನ್ನು ಯಶಸ್ವಿಗೋಳಿಸಲು ಹೆಚ್ಚು ಜನರನ್ನು ಕರೆದುತರಬೇಕು ನಾವು ಕೂಡ ಜಿಲ್ಲಾಧ್ಯಂತ ಓಡಾಡಿ ಜನರನ್ನು ಸೇರಿಸುವ ಕೆಲಸ ಮಾಡೋಣ ಎಂದರು.ಕಾರ್ಯಕ್ರಮದಲ್ಲಿ ಬೆಂಗಳೂರು ಮಾಜಿ ಮೆಯರ್ ವೆಂಕಟೇಶಮೂರ್ತಿ. ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಹೆಚ್ ಬಿ ಮಂಜಪ್ಪ, ಕಾಂಗ್ರೆಸ್ ಮುಖಂಡ ಸೈಯದ್ ಸೈಫುಲ್ಲಾ ಬಸವಂತಪ್ಪ,ಡಿ ಬಸವರಾಜ್. ಎಂ ಟಿ ಸುಭಾಷ್ ಚಂದ್ರ, ಮಾಜಿ ಕುಲಪತಿ ಮಹೇಶ್ವರಪ್ಪ, ನಾಗೇಂದ್ರಪ್ಪ ವಕೀಲರು, ಹೊದಿಗೆರೆ ರಮೇಶ್, ಪ್ರೊಫೆಸರ್ ಯಲ್ಲಪ್ಪ,ಮಾಜಿ ಜಿ,ಪಂ.ಸದಸ್ಯ ಪರಶುರಾಮಪ್ಪ, ಯುತ್ ರಂಗಸ್ವಾಮಿ, ಜಿಲ್ಲಾ ಅಧ್ಯಕ್ಷ ನಿಕಿಲ್ ಕೊಂಡಜ್ಜಿ, ಪಿ ರಾಜಕುಮಾರ್, ಅಲೆಮಾರಿ ಸಮಾಜದ ರಂಗಸ್ವಾಮಿ, ಸವಿತ ಸಮಾಜದ ಕತ್ಲಗೆರಿ ತಿಪ್ಪಣ್ಣ, ದಿನೇಶ್ ಶೆಟ್ಟಿ, ನಾಗರಾಜ್,ಗಡಿಗೂಡಳ್ ಮಂಜುನಾಥ್, ಹರಿಹರ ನಗರ ಸಭೆ ಮಾಜಿ ಅಧ್ಯಕ್ಷ ಬಿ ರೇವಣಸಿದ್ದಪ್ಪ, ಸತೀಶ್ ನಾಯ್ಕ್, ಸಂಗಪ್ಪ ಫೈಲ್ವನ, ಬಳ್ಳಾರಿ ಷಣ್ಮುಖಪ್ಪ, ಗೌಡ್ರ ಚನ್ನಬಸಪ್ಪ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!