ದಾವಣಗೆರೆಯಲ್ಲಿ ಖೋಟಾ ನೋಟು ಜಾಲ ಪತ್ತೆ ಇಬ್ಬರ ಬಂಧನ:1,20,700 ಖೋಟಾ ನೋಟು ವಶ

ದಾವಣಗೆರೆ: ದಾವಣಗೆರೆ ನಗರದಲ್ಲಿ ಇಂದು 10-08-2022 ರಂದು ಯಲ್ಲಮನಗರದ 4ನೇ ಮೇನ್ 6ನೇ ಕ್ರಾಸ್ ತೆಲಗಿ ಶೇಖರಪ್ಪನವರ ಮನೆ ಸಮೀಪ ಕಲರ್ ಜೆರಾಕ್ಸ್ ಮಿಷಿನ್ನಿಂದ ಜೆರಾಕ್ಸ್ ಮಾಡಿದ ಖೋಟಾ ನೋಟುಗಳನ್ನು ತೆಗೆದುಕೊಂಡು ಚಲಾವಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾವಣಗೆರೆ ಡಿಸಿಆರ್ಬಿ ಘಟಕದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಬಿ. ಎಸ್ ಬಸವರಾಜ್ ಹಾಗೂ ಡಿಸಿಆರ್ಬಿ ಘಟಕದ ಸಿಬ್ಬಂದಿಗಳು ಮೇಲ್ಕಂಡ ಸ್ಥಳಕ್ಕೆ ದಾಳಿ ಮಾಡಿ ಕಾನೂನುಬಾಹಿರವಾಗಿ ಖೋಟಾ ನೋಟು ಮುದ್ರಣ ಮತ್ತು ಚಲಾವಣೆಗೆ ಸಂಬಂಧಿಸಿದಂತೆ ಆರೋಪಿತರಾದ ಅಶೋಕ ಎಸ್ ಹಾಲೇಶಿ @ ಅರಸನಾಳು ಹಾಲೇಶಿ ಇವರುಗಳನ್ನು ದಸ್ತಗಿರಿ ಮಾಡಿ ಇವರಿಂದ 1,20,700/- ಖೋಟಾ ನೋಟುಗಳು, 01 ಕಲರ್ ಜೆರಾಕ್ಸ್ ಮಿಷಿನ್ ಹಾಗೂ ಇದಕ್ಕೆ ಸಂಬಂಧಿಸಿದ ಇತರೆ ಸಾಮಾಗ್ರಿಗಳನ್ನು ಅಮಾನತ್ತು ಪಡಿಸಿಕೊಂಡಿರುತ್ತಾರೆ.
ಸದರಿ ಪ್ರಕರಣದಲ್ಲಿ ಶ್ರೀ.ಬಿ.ಎಸ್.ಬಸವರಾಜ್ ಪೊಲೀಸ್ ಉಪಾಧೀಕ್ಷಕರು, ಡಿಸಿರ್ಬಿ ಘಟಕ, ಮತ್ತು ಸಿಬ್ಬಂದಿಗಳಾದ ಕೆ.ಸಿ ಮಜೀದ್, ಕೆ.ಟಿ. ಆಂಜನೇಯ, ಡಿ.ರಾಘವೇಂದ್ರ, ಯು.ಮಾರುತಿ, ಪಿ.ಸುರೇಶ್, ಜೆ.ಹೆಚ್.ಆರ್.ನಟರಾಜ್, ಈ.ಬಿ.ಅಶೋಕ, ಆರ್.ರಮೇಶ್ ನಾಯ್ಕ, ಸಿ.ಎಸ್.ಬಾಲರಾಜ್, ಸಿ.ಮಲ್ಲಿಕಾರ್ಜುನ್, ಪ್ರಶಾಂತ್ ಕುಮಾರ್ ಹಾಗೂ ನಿಂಗರಾಜ್ ಇವರುಗಳು ಕಾರ್ಯಾಚರಣೆಯಲ್ಲಿ ಬಾಗಿಯಾಗಿರುತ್ತಾರೆ. ಇವರ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು ದಾವಣಗೆರೆ ಜಿಲ್ಲೆ, ಹಾಗೂ ಹೆಚ್ಚುವರಿ ಪೊಲಿಸ್ ಅಧೀಕ್ಷಕರು, ದಾವಣಗೆರೆಯವರು ಶ್ಲಾಘಿಸಿರುತ್ತಾರೆ.
Please report to bank if found fake notes