ಮಾಯಕೊಂಡಕ್ಕೆ ಟಿಕೇಟ್ ನೀಡಲು ಹೆಚ್. ದುಗ್ಗಪ್ಪ ಮನವಿ.

Addition of Voter List Name, Request for Extension of Time.

ದಾವಣಗೆರೆ: ಮಾಯಕೊಂಡ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಎಂಎಲ್‌ಎ ಟಿಕೇಟ್ ಪಡೆದವರಿಗೆ, ಮಂತ್ರಿಸ್ಥಾನ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ನಿಗಮಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ಪಡೆದವರಿಗೆ ಮರಳಿ ಅಧಿಕಾರ ನೀಡದೆ ಪಕ್ಷಕ್ಕಾಗಿ ಕಳೆದ ನಾಲ್ಕು ದಶಕಗಳಿಂದ ದುಡಿಯುತ್ತಿರುವ ತಮಗೆ ಟಿಕೆಟ್ ನೀಡಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಕೆಪಿಸಿಸಿ ಎಸ್ಸಿ ಘಟಕದ ಕಾರ್ಯಕಾರಿಣಿ ಸದಸ್ಯ ಹೆಚ್. ದುಗ್ಗಪ್ಪ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳಲ್ಲಿ ತಾವು ನಿಷ್ಠೆಯಿಂದ ತಾವು ಕಾರ್ಯನಿರ್ವಹಿಸಿ ಪಕ್ಷದ ಸಂಘಟನೆಗೆ ಹಗಲಿರುಳು ಶ್ರಮಿಸಿದ್ದು, ಈಗ ರಾಜ್ಯ ಎಸ್ಸಿ ಘಟಕದ ಕಾರ್ಯಕಾರಿಣಿ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದೇನೆ. ಅಧಿಕಾರದ ದಾಹಕ್ಕಾಗಿ ಪಕ್ಷಾಂತರ ಮಾಡದೆ ಇಲ್ಲಿಯವರಿಗೂ ಒಂದೇ ಪಕ್ಷದಲ್ಲಿ ದುಡಿದಿರುವ ತಮಗೆ ಇದುವರೆಗೂ ಯಾವುದೇ ಸ್ಥಾನಮಾನವನ್ನೂ ಪಕ್ಷ ನೀಡಿಲ್ಲ. ಆದ್ದರಿಂದ ಈ ಬಾರಿ ಮಾಯಕೊಂಡ ಕ್ಷೇತ್ರಕ್ಕೆ ತಮಗೆ ಟಿಕೇಟ್ ನೀಡಬೇಕೆಂದು ಅವರು ಖರ್ಗೆಗೆ ಭಿನ್ನವತ್ತಳೆ ಅರ್ಪಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!