ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಡಿ 17 ರಂದು ಕರ್ನಾಟಕ ರಾಜ್ಯೋತ್ಸವ ಮತ್ತು ಹಾಸ್ಯ ಸಂಜೆ

Karnataka Rajyotsava and comedy evening on 13th December by World Karnataka Defense Forum.

ದಾವಣಗೆರೆ: ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಡಿ.೧೭ರಂದು ಸಂಜೆ ೬ ಗಂಟೆಗೆ ನಗರದ ಶಿವಯೋಗಿ ಮಂದಿರದಲ್ಲಿ ೬೭ನೇ ಕರ್ನಾಟಕ ರಾಜ್ಯೋತ್ಸವ ಮತ್ತು ಹಾಸ್ಯ ಸಂಜೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ವಿರಕ್ತಮಠದ ಶ್ರೀಬಸವಪ್ರಭು ಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ, ವೇದಿಕೆಯ ರಾಜ್ಯಾಧ್ಯಕ್ಷ ಕೆ.ಜಿ. ಯಲ್ಲಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಸಂಸದ ಡಾ.ಜಿ.ಎಂ. ಸಿದ್ದೇಶ್ವರ ಉದ್ಘಾಟಿಸುವರು. ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಶಾಸಕ ಎಸ್.ಎ. ರವೀಂದ್ರನಾಥ್ ಭುವನೇಶ್ವರಿ ಭಾವಚಿತ್ರವನ್ನು ಅನಾವರಣಗೊಳಿಸುವರು.

ಮುಖ್ಯ ಅತಿಥಿಗಳಾಗಿ ಶಾಸಕ ಎಸ್.ವಿ. ರಾಮಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಪಂ ಸಿಇಒ ಡಾ.ಎ.ಚನ್ನಪ್ಪ, ಮೇಯರ್ ಜಯಮ್ಮ ಗೋಪಿ ನಾಯ್ಕ, ಧೂಡಾ ಅಧ್ಯಕ್ಷ ಎ.ವೈ. ಪ್ರಕಾಶ್, ವಿಶ್ವಚೇತನ ವಿದ್ಯಾಸಂಸ್ಥೆ ಮುಖ್ಯಸ್ಥೆ ಡಾ.ವಿಜಯಲಕ್ಷ್ಮಿ ವೀರಮಾಚಿನೇನಿ, ಪಾಲಿಕೆ ಸದಸ್ಯರಾದ ಎಸ್.ಟಿ. ವೀರೇಶ್, ಬಿ.ಜಿ. ಅಜಯಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ನಾಗರಾಜ ಲೋಕಿಕೆರೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ಭೈರೇಶ್ವರ ಎಲೆಕ್ಟ್ರಿಕಲ್ಸ್ ಮಾಲೀಕ ಎಂ. ಆನಂದಪ್ಪ, ಶ್ರೀ ಸೋಮೇಶ್ವರ ಶಾಲೆ ಸಂಸ್ಥಾಪಕ ಕೆ.ಎಂ. ಸುರೇಶ್, ಕಾಂಗ್ರೆಸ್ ಮುಖಂಡ ಆರ್.ಎಲ್. ನಾಗಭೂಷಣ್ ಮತ್ತಿತರರು ಭಾಗವಹಿಸುವರು.

ಈ ವೇಳೆ ಅಂಬಾಭವಾನಿ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸಿ.ಎ. ಕಿರಣ್‌ಕುಮಾರ್, ಚಿತ್ರ ಕಲಾವಿದ ಶಾಂತಯ್ಯ ಪರಡಿಮಠ, ಸಮಾಜ ಸೇವಕ ಪ್ರಸನ್ನಕುಮಾರ ಚಿತ್ರಗಾರ ರಾಘಣ್ಣ, ಪತ್ರಕರ್ತರಾದ ಬಾಲಕೃಷ್ಣ ಶಿಬಾರ್ಲ, ಎ.ಎನ್. ನಿಂಗಪ್ಪ, ಕೆ.ಎನ್. ಮಲ್ಲಿಕಾರ್ಜುನಮೂರ್ತಿ, ಚನ್ನಬಸವ ಶೀಲವಂತ, ಆರ್. ಶಾಂತಕುಮಾರ್, ಎ.ಪಿ. ಸಂಜಯ್ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು.

ಉದ್ಯಾನವನ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಎಂ.ಸೋಮಶೇಖರಪ್ಪ ಉಪನ್ಯಾಸ ನೀಡುವರು. ಜೆ.ಚೇತನ್‌ಕುಮಾರ್ ಮತ್ತು ಸಂಗಡಿಗರು ಗೀತ ಗಾಯನ ನಡೆಸಿಕೊಡುವರು. ಹಾಸ್ಯ ಕಲಾವಿದರಾದ ಕೋಗಳಿ ಕೊಟ್ರೇಶ್, ಮಹಾಂತೇಶ ಕುನ್ನಾಳ, ಪ್ರಸಿದ್ಧ ಕೃಷ್ಣ ಹಾಸ್ಯ ಸಂಜೆ ನಡೆಸಿಕೊಡುವರು ಎಂದು ವೇದಿಕೆಯ ರಾಜ್ಯಾಧ್ಯಕ್ಷ ಕೆ.ಜಿ. ಯಲ್ಲಪ್ಪ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!