ಸುಟ್ಟಿರುವ ಕಬ್ಬಿನ ಹೊಲಕ್ಕೆ ಭೇಟಿ ನೀಡಿದ ಬಿಜೆಪಿ ರೈತ ಮೋರ್ಚಾ ರಾಜ್ಯ ಸಂಚಾಲಕ: ರೈತರಿಗೆ ಸಾಂತ್ವಾನ ಹೇಳಿದ ಬಿಎಂ ಸತೀಶ್

BJP Farmer Morcha State Coordinator visited the burnt sugarcane field: BM Satish consoled the farmers

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಮುದಹದಡಿ ಗ್ರಾಮದ ಊರಮುಂದಲ ನೀಲಪ್ಪನವರಿಗೆ ಸೇರಿದ 3 ಎಕರೆ ಕಬ್ಬಿನ ಬೆಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟಿದೆ. ತೆಂಗು ಮತ್ತು ಅಡಿಕೆ ತೋಟದಲ್ಲಿ ಅಂತರ ಬೆಳೆಯಾಗಿ ಕಬ್ಬು ಬೆಳೆದಿದ್ದಾರೆ. ಬಹು ವಾರ್ಷಿಕ ಬೆಳೆಗಳಾದ ತೆಂಗು ಮತ್ತು ಅಡಿಕೆ ಮರಗಳು ಸುಟ್ಟು ಭಸ್ಮವಾಗಿವೆ.
ಬಿಜೆಪಿ ರೈತ ಮೋರ್ಚಾ ರಾಜ್ಯ ಸಂಚಾಲಕ ಕೊಳೇನಹಳ್ಳಿ ಬಿ ಎಂ ಸತೀಶ್ ರವರು ಇಂದು ಸುಟ್ಟಿರುವ ಕಬ್ಬಿನ ಹೊಲಕ್ಕೆ ಭೇಟಿ ನೀಡಿ ನೊಂದ ರೈತರನ್ನು ಮಾತನಾಡಿಸಿ, ದೈರ್ಯ ಹೇಳಿದರು.
ಈಗಾಗಲೇ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಬಿಜೆಪಿ ರೈತ ಮೋರ್ಚಾ ದಿಂದ ಮನವಿ ಸಲ್ಲಿಸಲಾಗಿದೆ. ಬೆಸ್ಕಾಂ ಅಧಿಕಾರಿಗಳ, ಸಕ್ಕರೆ ಕಾರ್ಖಾನೆ ಮಾಲೀಕರ ಮತ್ತು ರೈತರ ಸಭೆ ಕರೆದು ಕೂಲಂಕಷವಾಗಿ ಚರ್ಚಿಸಿ ಪರಿಹಾರ ನೀಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಡಿ ಸಿ ಶಿವಾನಂದ ಕಪಾಸಿ ಯವರು ಹೇಳಿದ್ದರು. ಆದರೆ ಇದುವರೆಗೂ ಯಾವ ಕ್ರಮ ಕೈಗೊಂಡಿಲ್ಲ. ಕಷ್ಟ ಪಟ್ಟು ಬೆವರು ಸುರಿಸಿ ಬೆಳೆದ ಕಬ್ಬು, ಅಡಿಕೆ ಮತ್ತು ತೆಂಗು ಬೆಳೆಗೆ ಬೆಂಕಿ ಅವಘಡ ಪದೇ ಪದೇ ಸಂಭವಿಸುತ್ತಿವೆ. ಆದ್ದರಿಂದ ಜಿಲ್ಲಾಡಳಿತ ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಬಿ ಎಂ ಸತೀಶ್ ಆಗ್ರಹಿಸಿದ್ದಾರೆ
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಜರಿಕಟ್ಟೆ ಎ ಬಿ ಹನುಮಂತಪ್ಪ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಮುದಹದಡಿ ಬಿ ದಿಳ್ಳೆಪ್ಪ, ಊರಮುಂದಲ ದಿಳ್ಳೆಪ್ಪ, ಬಿಸಲೇರಿ ದಿಳ್ಳೆಪ್ಪ, ಟಿ ವಿ ತೇಜಸ್ವಿ, ಮಹೇಶ್ವರಗೌಡ್ರು ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!