ಕೋವಿಡ್ ನಿಯಂತ್ರಣಕ್ಕೆ ಕಠಿಣ ಮಾರ್ಗಸೂಚಿ: ಭಾನುವಾರ ಮಹತ್ವದ ಸಭೆ

Tough guidelines for Covid control: Important meeting on Sunday

ಬೆಂಗಳೂರು: ಕೋವಿಡ್ 19 ಹೆಚ್ಚಳವಾಗುತ್ತಿರುವ ಹೊಸ ಹಿನ್ನೆಲೆಯಲ್ಲಿ ಪರಿಣಾಮಕಾರಿ ಮುಂಜಾಗ್ರತಾ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಸಂಬಂಧ ಭಾನುವಾರ ಮಹತ್ವದ ಸಭೆ ನಡೆಯಲಿದೆ.

ಈ ಕುರಿತಂತೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡ ಸಿಎಂ ಬಸವರಾಜ್ ಬೊಮ್ಮಾಯಿ, ಭಾನುವಾರ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ: ಸುಧಾಕರ್ ಅವರು ಸಭೆ ನಡೆಸಲಿದ್ದು, ಬೋಸ್ಟರ್ ಡೋಸ್ ಗಳನ್ನು ಕೊಡಲು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಶಿಬಿರಗಳನ್ನು ಏರ್ಪಡಿಸುವುದು, ಪರೀಕ್ಷೆಗಳನ್ನು ನಡೆಸುವುದು, ಪ್ರತಿಯೊಂದು ಐಎಲ್ ಐ, ಸಾರಿ ಪ್ರಕರಣಗಳಿಗೆ ಕಡ್ಡಾಯವಾಗಿ ಪರೀಕ್ಷೆ ಕೈಗೊಳ್ಳುವುದು, ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಮುಂತಾದ ಕ್ರಮ ಕೈಗೊಳ್ಳಲಾಗುವ ಕುರಿತು ತೀರ್ಮಾನಿಸಲಾಗುವುದು ಎಂದರು.

ಆರೋಗ್ಯ ಮೂಲಸೌಕರ್ಯ ಗಳಾದ ಔಷಧಿ, ಲಸಿಕೆ ಇವೆಲ್ಲವನ್ನೂ ದಾಸ್ತಾನು ಮಾಡಿಕೊಳ್ಳಲು ಕ್ರಮ ವಹಿಸಬೇಕು, ಯಾವುದೇ ಸಂದರ್ಭದಲ್ಲಿ ಯಾವುದೇ ಕೊರತೆಯಾಗಬಾರದು, ಆಮ್ಲಜನಕ ಘಟಕಗಳನ್ನು ಡ್ರೈ ರನ್ ಮಾಡಿ ಸುಸ್ಥಿತಿಯಲ್ಲಿ ಇಟ್ಟುಕೊಳ್ಳಲು ಆರೋಗ್ಯ ಸಚಿವರಿಗೆ ಸೂಚನೆ ನೀಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಯೂ ನಿರಂತರವಾಗಿ ನಿಗಾ ವಹಿಸಿ, ನಿರ್ಬಂಧಗಳನ್ನು ಹೇರಲಾಗಿದೆ. ವ್ಯಕ್ತಿ, ಸಂಘ, ಸರ್ಕಾರ, ಸಮಾಜ ಎಲ್ಲರೂ ಸೇರಿ ಇದನ್ನು ಎದುರಿಸಬೇಕಿದೆ. ಹೊಸ ವರ್ಷಾಚರಣೆಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದವರು ತಿಳಿಸಿದರು.

 

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!