ವಕೀಲರ ಸಂರಕ್ಷಣಾ ಕಾಯಿದೆ ಜಾರಿಯಾಗದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ: ಸರ್ಕಾರಕ್ಕೆ ಎಚ್ಚರಿಕೆ

ಬೆಂಗಳೂರು: ಕರ್ನಾಟಕ ವಕೀಲರ ಸಂರಕ್ಷಣಾ ಕಾಯಿದೆಯ ವಿಧೇಯಕವನ್ನು ಪ್ರಸಕ್ತ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಬೇಕು. ಇಲ್ಲದಿದ್ದರೆ ಯಾವುದೇ ರೀತಿಯಲ್ಲಿ ವಕೀಲರು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಐದು ವರ್ಷದ ಕಾನೂನು ಅಧ್ಯಯನ ಕೋರ್ಸ್ನ ವಕೀಲರ ಸಂಘ ಎಚ್ಚರಿಕೆ ನೀಡಿದೆ.
ಕರ್ನಾಟಕ ರಾಜ್ಯದ ವಕೀಲರ ಸುರಕ್ಷತೆ ಮತ್ತು ರಕ್ಷಣೆಗಾಗಿ ಬಹುಕಾಲದಿಂದ ಅಂಗೀಕಾರಗೊಳ್ಳದೆ ಬಾಕಿ ಉಳಿದಿದೆ. ಈ ಬಾರಿ ಅದನ್ನು ಅಧಿವೇಶನದಲ್ಲಿ ಚರ್ಚಿಸಿ ಅಂಗೀಕರಿಸಬೇಕು. ಇಲ್ಲದಿದ್ದರೆ ವಕೀಲರ ಹಿತಕ್ಕಾಗಿ ಪ್ರಾಣ ಕೊಡಲೂ ಹಿಂಜರಿಯುವುದಿಲ್ಲ ಎಂದು ಸಂಘದ ಅಧ್ಯಕ್ಷ ಎಸ್. ಉಮೇಶ್ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಾನೂನು ಸಚಿವ ಮಾಧುಸ್ವಾಮಿ ಅವರು ಈ ಬಗ್ಗೆ ವಿಶೇಷ ಗಮನ ಹರಿಸಬೇಕು. ಒಂದು ವೇಳೆ ವಿಧೇಯಕ ಮಂಡನೆ ವಿಳಂಬವಾದಲ್ಲಿ ನಾವು ಎಂಥದೇ ಹೋರಾಟಕ್ಕೂ ಸಿದ್ಧ. ವಕೀಲರ ಭವಿಷ್ಯಕ್ಕಾಗಿ ಪ್ರಾಣ ಕೊಡಲೂ ಸಿದ್ಧರಿದ್ದು, ಯಾವುದೇ ಹಂತದಲ್ಲಾದರೂ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದಿದ್ದಾರೆ.