ಅಪರಾಧದಾವಣಗೆರೆ

Canara Bank: ಕೆನರಾ ಬ್ಯಾಂಕ್‌ಗೆ 4.15 ಲಕ್ಷ ರೂ. ದಂಡ ವಿಧಿಸಿದ ದಾವಣಗೆರೆ ಜಿಲ್ಲಾ ಗ್ರಾಹಕರ ಆಯೋಗ

Share
Share

ದಾವಣಗೆರೆ: (Canara Bank) ಗೃಹ ಸಾಲದ ಮೂಲ ದಾಖಲೆಗಳನ್ನು ಹಿಂತಿರುಗಿಸುವಲ್ಲಿ ನಿರ್ಲಕ್ಷ್ಯ ತೋರಿದ ಕೆನರಾ ಬ್ಯಾಂಕ್‌ಗೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಒಟ್ಟು 4,15,000 ರೂ.ಗಳ ಪರಿಹಾರ ಪಾವತಿಸುವಂತೆ ಮಹತ್ವದ ಆದೇಶ ನೀಡಿದೆ.

ನಗರದ ಶ್ರೀಮತಿ ಮಂಜುಳಾ ಕೆ.ಬಿ. ಅವರು ಕೆನರಾ ಬ್ಯಾಂಕ್‌ನಲ್ಲಿ ತಮ್ಮ ಮನೆಯ ಮೂಲ ದಾಖಲೆಗಳನ್ನು ಅಡಮಾನವಿಟ್ಟು 21,50,000 ರೂ.ಗಳ ಗೃಹ ಸಾಲ ಪಡೆದಿದ್ದರು. 2024 ರ ಸೆಪ್ಟೆಂಬರ್‌ 11 ರಂದು ಅವರು ಸಾಲದ ಸಂಪೂರ್ಣ ಮೊತ್ತವನ್ನು ಮರುಪಾವತಿಸಿ, ಸಾಲದ ಖಾತೆಯನ್ನು ರದ್ದುಗೊಳಿಸಿರುತ್ತಾರೆ.  ಸಾಲ ತೀರಿಸಿದ ನಂತರ ತಮ್ಮ ಮೂಲ  ದಾಖಲೆಗಳನ್ನು ಹಿಂಪಡೆಯಲು ಬ್ಯಾಂಕ್‌ಗೆ ಮನವಿ ಸಲ್ಲಿಸಿದಾಗ, ಬ್ಯಾಂಕ್ ಅಧಿಕಾರಿಗಳು ಸದರಿ ದಾಖಲೆಗಳು ಕಳೆದುಹೋಗಿವೆ ಎಂದು ತಿಳಿಸಿ ಕೇವಲ ದೃಢೀಕೃತ ಪ್ರತಿಗಳನ್ನು ನೀಡುವುದಾಗಿ ಹೇಳಿದ್ದರು.

ಬ್ಯಾಂಕ್‌ನ ಈ ಬೇಜವಾಬ್ದಾರಿತನದಿಂದ ನೊಂದ ಗ್ರಾಹಕರು, ಅಸಲು ದಾಖಲೆಗಳಿಲ್ಲದೆ ಭವಿಷ್ಯದಲ್ಲಿ ಆಸ್ತಿಯ ಮೌಲ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಜಿಲ್ಲಾ ಗ್ರಾಹಕ ಆಯೋಗದ ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಗ್ರಾಹಕ ಆಯೋಗದ ಅಧ್ಯಕ್ಷರಾದ ಕುಮಾರಿ ಹೆಚ್.ಎನ್ಮೀನಾ ಹಾಗೂ ಸದಸ್ಯರಾದ ಶ್ರೀ ತ್ಯಾಗರಾಜನ್ ಸಿ.ಎಸ್. ಅವರನ್ನೊಳಗೊಂಡ ಪೀಠವು ಬ್ಯಾಂಕ್‌ನ ಸೇವೆಯಲ್ಲಿ ಗಂಭೀರ ಲೋಪವಿರುವುದನ್ನು ಎತ್ತಿ ಹಿಡಿದಿದೆ. ಆಯೋಗವು ಏಪ್ರಿಲ್‌ 21 ರಂದು ಕಳೆದುಹೋದ ಅಸಲು ದಾಖಲೆಗಳ ಬದಲಾಗಿ ದೂರುದಾರರಿಗೆ 4,00,000 ರೂ.ಗಳನ್ನು ವಾರ್ಷಿಕ ಶೇ. 8 ರಷ್ಟು ಬಡ್ಡಿಯೊಂದಿಗೆ ಪಾವತಿಸಬೇಕು.

ದೂರುದಾರರಿಗೆ ಉಂಟಾದ ಮಾನಸಿಕ ಯಾತನೆ ಹಾಗೂ ದೂರಿನ ವೆಚ್ಚಕ್ಕಾಗಿ ಹೆಚ್ಚುವರಿ 15,000 ರೂ.ಗಳನ್ನು ನೀಡಬೇಕು. ಮತ್ತು ಆದೇಶ ಹೊರಬಂದ ಒಂದು ತಿಂಗಳ ಒಳಗಾಗಿ ಈ ಒಟ್ಟು ಮೊತ್ತವನ್ನು ದೂರುದಾರರಿಗೆ ಪಾವತಿಸಲು ಬ್ಯಾಂಕ್‌ಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟ್ರಾರ್‌ ಹಾಗೂ ಸಹಾಯಕ ಆಡಳಿತಾಧಿಕಾರಿ ಪದ್ಮ ಪಿ.ಎಸ್‌ ರವರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ದಾವಣಗೆರೆ

Water: ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು: ಜಿಲ್ಲೆಯ 103 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ – ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳಿಗೆ ಸಿಇಒ ಕಟ್ಟುನಿಟ್ಟಿನ ಸೂಚನೆ

ದಾವಣಗೆರೆ: (Water Crisis) ಜಿಲ್ಲೆಯಲ್ಲಿ ಬೇಸಿಗೆಯ ಹಿನ್ನೆಲೆಯಲ್ಲಿ ಉದ್ಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಹಾಗೂ ಈ ನಿಟ್ಟಿನಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ...

ರಾಜ್ಯ / ಕರ್ನಾಟಕ

DG&IGP: ಡಾ.ಎಂ.ಎ. ಸಲೀಂ ಕರ್ನಾಟಕದ ಡಿಜಿ ಮತ್ತು ಐಜಿಪಿಯಾಗಿ ಮುಂದುವರಿಕೆ

ಬೆಂಗಳೂರು: (DG&IGP) ಕರ್ನಾಟಕ ಸರ್ಕಾರದ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಐನ್ಸ್‌ಪೆಕ್ಟರ್ ಜನರಲ್ (ಪೊಲೀಸ್ ಪಡೆಯ ಮುಖ್ಯಸ್ಥರು) ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ಎಂ.ಎ. ಸಲೀಂ (IPS: 1993) ಅವರನ್ನು ಅದೇ ಹುದ್ದೆಯಲ್ಲಿ...

Related Articles
ಅಪರಾಧರಾಜ್ಯ / ಕರ್ನಾಟಕ

Sand: ಶಿವಮೊಗ್ಗ ಜಿಲ್ಲೆಯಲ್ಲಿ ಲೋಕಾಯುಕ್ತರ ಭರ್ಜರಿ ಬೇಟೆ: 25ಕ್ಕೂ ಹೆಚ್ಚು ಅಕ್ರಮ ಮರಳು ಕ್ವಾರಿಗಳ ಮೇಲೆ ದಾಳಿ, 50ಕ್ಕೂ ಹೆಚ್ಚು ವಾಹನಗಳ ಜಪ್ತಿ!

​ಶಿವಮೊಗ್ಗ:(Sand) ಶಿವಮೊಗ್ಗ ಜಿಲ್ಲೆಯಲ್ಲಿ ದೀರ್ಘಕಾಲದಿಂದ ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ದಂಧೆಗೆ ಲೋಕಾಯುಕ್ತ ಪೊಲೀಸರು ಮರಣಶಾಸನ ಬರೆದಿದ್ದಾರೆ....

ದಾವಣಗೆರೆರಾಜ್ಯ / ಕರ್ನಾಟಕ

Transfer: ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆ: ದಾವಣಗೆರೆ ಜಿಲ್ಲೆಯ ವಿವರಗಳು

ದಾವಣಗೆರೆ: (Transfer) ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ರಾಜ್ಯದ ಹಲವು ತಹಶೀಲ್ದಾರ್‌ಗಳನ್ನು ವರ್ಗಾವಣೆ ಮಾಡಿ ಇಂದು...

ದಾವಣಗೆರೆಅಪರಾಧರಾಜ್ಯ / ಕರ್ನಾಟಕ

Road: ರಸ್ತೆ ಸುರಕ್ಷತೆ ಮತ್ತು ಕಾನೂನುಬದ್ಧ ವಾಹನ ನಿರ್ವಹಣೆ. ದ್ವಿಚಕ್ರ ವಾಹನಗಳಿಗೆ ಸೀಮಿತವಾದ ತಪಾಸಣೆ.!

ದಾವಣಗೆರೆ: ( Road) ಭಾರತೀಯ ರಸ್ತೆಗಳಲ್ಲಿ ಸಂಚರಿಸುವ ಪ್ರತಿ ವಾಹನವು ನಿರ್ದಿಷ್ಟ ಸುರಕ್ಷತಾ ಮಾನದಂಡಗಳಿಗೆ ಒಳಪಟ್ಟಿರುತ್ತದೆ....

ದಾವಣಗೆರೆ

Corporation: ಶಿಥಿಲಾವಸ್ಥೆಯಲ್ಲಿರುವ ಅಪಾಯಕಾರಿ ಕಟ್ಟಡಗಳನ್ನು 7 ದಿನಗಳೊಳಗೆ ತೆರವುಗೊಳಿಸಸಲು ಪಾಲಿಕೆ ಆಯುಕ್ತರ ಆದೇಶ

ದಾವಣಗೆರೆ: (Corporation):  ಹಳೆಯ ಮತ್ತು ಶಿಥಿಲಗೊಂಡ ಕಟ್ಟಡಗಳಿಂದ ಸಂಭವಿಸಬಹುದಾದ ಮುಂಜಾಗ್ರತಾ ಹಾನಿಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆ ಅಥವಾ ಅಪಾಯಕಾರಿ ಸ್ಥಿತಿಯಲ್ಲಿರುವ ಸಂಪೂರ್ಣ ಕಟ್ಟಡ ಅಥವಾ ಕಟ್ಟಡದ ಭಾಗವನ್ನು ಈ ಪ್ರಕಟಣೆ ಹೊರಡಿಸಿದ 7 ದಿನಗಳೊಳಗಾಗಿತೆರವುಗೊಳಿಸಬೇಕು ಅಥವಾ ರಿಪೇರಿ ಮಾಡಿಕೊಳ್ಳಬೇಕು ಎಂದು ಮಹಾನಗರಪಾಲಿಕೆ ಆಯುಕ್ತರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆಯನ್ವಯ ಪಾಲಿಕೆ ವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿ ಸ್ಥಳ ಪರಿಶೀಲನೆ ನಡೆಸಿದಾಗ ಕೆಲವು ಕಟ್ಟಡಗಳು ಸಾರ್ವಜನಿಕರಿಗೆ ಹಾಗೂ ನೆರೆ-ಹೊರೆಯ ಆಸ್ತಿಪಾಸ್ತಿಗಳಿಗೆ ಅಪಾಯವನ್ನುಂಟು ಮಾಡುವ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಸದರಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ಅಥವಾ ಅದರ ಭಾಗದಿಂದ ಯಾವುದೇ ರೀತಿಯ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿದಲ್ಲಿ ಅದಕ್ಕೆ ಸಂಬಂಧಪಟ್ಟ ಮಾಲೀಕರು ಅಥವಾ ಅನುಭೋಗದಾರರೇ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ, ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಆ್ಯಕ್ಟ್ 1976ರ ಸೆಕ್ಷನ್ 322ರ ಅನ್ವಯ, ಮಾಲೀಕರು ತಕ್ಷಣವೇ ಕಟ್ಟಡದ ರಿಪೇರಿ/ತೆರವು ಕಾರ್ಯಾಚರಣೆ ನಡೆಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗ್ರತೆಯಾಗಿ ಕಟ್ಟಡದ ಸುತ್ತಲೂ ಸುರಕ್ಷತಾ ಬೇಲಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ನಿಗದಿತ 07 ದಿನಗಳ ಅವಧಿಯೊಳಗೆ ಮಾಲೀಕರು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ಯಾವುದೇ ಪೂರ್ವಭಾವಿ ನೋಟೀಸ್ ನೀಡದೆ ಪಾಲಿಕೆ ವತಿಯಿಂದಲೇ ಸಂಪೂರ್ಣ ಕಟ್ಟಡ ಅಥವಾ ಅದರ ಭಾಗವನ್ನು ತೆರವುಗೊಳಿಸಲಾಗುವುದು. ಇದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ಸಂಬಂಧಪಟ್ಟ ಮಾಲೀಕರು/ಅನುಭೋಗದಾರರಿಂದಲೇ ವಸೂಲಿ ಮಾಡಲಾಗುವುದು. ಇಂತಹ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಒಳಗೆ ಸಾರ್ವಜನಿಕರು ಪ್ರವೇಶಿಸಬಾರದು ಹಾಗೂ ಇಂತಹ ಅಪಾಯಕಾರಿ ಕಟ್ಟಡಗಳ ಸುತ್ತಮುತ್ತ ಸಂಚರಿಸುವಾಗ ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ಇರಬೇಕಾಗಿ ಮಹಾನಗರ ಪಾಲಿಕೆ ಆಯುಕ್ತರಾದ ಮಹಾಂತೇಶ್‌  ತಿಳಿಸಿದ್ದಾರೆ.