ದಾವಣಗೆರೆ

Panchamasali: ಹರಿಹರ ಪಂಚಮಸಾಲಿ ಪೀಠದಲ್ಲಿ ‘ಲೆಕ್ಕದ’ ಸಮರ! ಸ್ವಾಮೀಜಿ vs ಟ್ರಸ್ಟಿಗಳ ನೇರ ಹಣಾಹಣಿ!

Share
Share

ದಾವಣಗೆರೆ: (Panchamasali) ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಮಠದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಮುಸುಕಿನ ಗುದ್ದಾಟ ಈಗ ಬೀದಿಗೆ ಬಂದಿದೆ. ವಚನಾನಂದ ಸ್ವಾಮೀಜಿ ಹಾಗೂ ಮಠದ ಟ್ರಸ್ಟಿಗಳ ನಡುವಿನ ಸಮರ ತಾರಕಕ್ಕೇರಿದ್ದು, ‘ಲೆಕ್ಕ ಕೊಡುವ’ ಕಾರ್ಯಕ್ರಮದಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. “ತಾಕತ್ ಇದ್ರೆ ಬಾರೋ ನೋಡ್ಕೊಳ್ತೀನಿ” ಎಂದು ಟ್ರಸ್ಟಿಯೊಬ್ಬರು ಬಹಿರಂಗವಾಗಿಯೇ ಸವಾಲು ಹಾಕಿದ್ದಾರೆ!

*ಭಾಗ 1: ವೇದಿಕೆ ಮೇಲೆ ವಾಗ್ವಾದ ಮತ್ತು ಸವಾಲು*

ಮಠದ ಹಣಕಾಸಿನ ವಿಚಾರವಾಗಿ ಸ್ವಾಮೀಜಿ ಮಾಡಿದ್ದ ಭ್ರಷ್ಟಾಚಾರದ ಆರೋಪಕ್ಕೆ ಉತ್ತರ ನೀಡಲು ಟ್ರಸ್ಟಿಗಳು ‘ಲೆಕ್ಕ ಕೊಡುವ ಅಭಿಯಾನ’ ಹಮ್ಮಿಕೊಂಡಿದ್ದರು. ಪ್ರಧಾನ ಧರ್ಮದರ್ಶಿ *ಬಿಸಿ ಉಮಾಪತಿ* ಲೆಕ್ಕ ಮಂಡಿಸುತ್ತಿದ್ದಾಗ, ಸ್ವಾಮೀಜಿ ಬೆಂಬಲಿಗರು ಅಡ್ಡಿಪಡಿಸಿದರು. ಈ ವೇಳೆ ಸಿಡಿದೆದ್ದ ಟ್ರಸ್ಟಿ *ಹೆಚ್.ಎಸ್. ನಾಗರಾಜ್*
*“ನಾನು ಮಾಜಿ ಸಚಿವ ಶಿವಪ್ಪನ ಮಗ! ತಾಕತ್ ಇದ್ರೆ ವೇದಿಕೆ ಮೇಲೆ ಬನ್ನಿ, ಅಲ್ಲೇ ನೋಡ್ಕೊಳ್ತೀನಿ. ಸಮಾಜ ಇಬ್ಬಾಗ ಮಾಡ್ತಿರೋ ಆ ಸ್ವಾಮಿಯಿಂದಲೇ ಇಷ್ಟೆಲ್ಲಾ ರಾದ್ಧಾಂತ ಆಗ್ತಿರೋದು”* ಎಂದು ಗುಡುಗಿದರು.

*ಭಾಗ 2: ಹಲ್ಲೆ ಆರೋಪ ಮತ್ತು ಘೋಷಣೆಗಳ ಅಬ್ಬರ*
ಲೆಕ್ಕ ಕೇಳಲು ಬಂದಿದ್ದ ಯುವ ಘಟಕದ ಕಾರ್ಯಾಧ್ಯಕ್ಷ *ಶಿವನಗೌಡ ಪಾಟೀಲ್* ಮೇಲೆ ಟ್ರಸ್ಟಿಗಳ ಬೆಂಬಲಿಗರು ಹಲ್ಲೆಗೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ರೊಚ್ಚಿಗೆದ್ದ ಸ್ವಾಮೀಜಿ ಅಭಿಮಾನಿಗಳು “ಟ್ರಸ್ಟಿಗಳೆಲ್ಲಾ ಕಳ್ಳರು” ಎಂದು ಘೋಷಣೆ ಕೂಗಿದರು. ಬಿಸಿ ಉಮಾಪತಿ ನೀಡುತ್ತಿರುವುದು “ಕಳ್ಳ ಲೆಕ್ಕ” ಎಂದು ಆಕ್ರೋಶ ಹೊರಹಾಕಿದರು. ವೇದಿಕೆಯತ್ತ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟರು.

*ಭಾಗ 3: ಕೇಂದ್ರ ಸಚಿವ ವಿ. ಸೋಮಣ್ಣ ಎಂಟ್ರಿ!*
ಸಂಘರ್ಷ ತಾರಕಕ್ಕೇರುತ್ತಿದ್ದಂತೆ ಕೇಂದ್ರ ಸಚಿವ *ವಿ. ಸೋಮಣ್ಣ* ಅವರು ಬಿಸಿ ಉಮಾಪತಿ ಅವರಿಗೆ ಕರೆ ಮಾಡಿ ಸಮಾಧಾನಪಡಿಸಲು ಯತ್ನಿಸಿದರು. ಆದರೆ ಉಮಾಪತಿ ಮಾತ್ರ ಪಟ್ಟು ಸಡಿಲಿಸಲಿಲ್ಲ *“ಸೋಮಣ್ಣನವರೇ, ಇಲ್ಲಿ ನಮ್ಮ ಮರ್ಯಾದೆ ಪ್ರಶ್ನೆ ಇದೆ. ಮುರುಗೇಶ್ ನಿರಾಣಿ ಹಾಗೂ ನಿಮ್ಮ ಮಾತಿಗಾಗಿ ಇಷ್ಟು ದಿನ ಸುಮ್ಮನಿದ್ದೆವು. ಆದರೆ ಸ್ವಾಮೀಜಿ ನಮ್ಮ ಮೇಲೆ ಸವಾರಿ ಮಾಡುವುದನ್ನು ಸಹಿಸಲ್ಲ. ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ”* ಎಂದು ಫೋನ್‌ನಲ್ಲೇ ಖಡಕ್ ಆಗಿ ಪ್ರತಿಕ್ರಿಯಿಸಿದರು.

ಸದ್ಯ ಹರಿಹರ ಮಠದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಮಠದ ಆವರಣದಾದ್ಯಂತ ಪೊಲೀಸ್ ಕಾವಲು ಹಾಕಲಾಗಿದ್ದು, ಭಕ್ತ ಸಮೂಹ ಈ ಬೆಳವಣಿಗೆಯಿಂದ ತೀವ್ರ ಆತಂಕಕ್ಕೆ ಒಳಗಾಗಿದೆ. ಮಠದ ಗೌರವ ಕಾಪಾಡಬೇಕಾದವರೇ ಹೀಗೆ ಬೀದಿಯಲ್ಲಿ ಜಗಳವಾಡುತ್ತಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

*ವರದಿ:- ಹೆಚ್ ಎಂ ಪಿ ಕುಮಾರ್, Copyright Protected*

Share

Leave a comment

Leave a Reply

Your email address will not be published. Required fields are marked *

Don't Miss

ರಾಜ್ಯ / ಕರ್ನಾಟಕ

DYSP: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಸರ್ಜರಿ: 74 ಡಿವೈಎಸ್‌ಪಿಗಳ ವರ್ಗಾವಣೆ – ಇಲ್ಲಿದೆ ಕಂಪ್ಲೀಟ್ ಲಿಸ್ಟ್

ಬೆಂಗಳೂರು:(DYSP) ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ದೊಡ್ಡ ಮಟ್ಟದ ವರ್ಗಾವಣೆ ಪ್ರಕ್ರಿಯೆ ನಡೆಸಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಕೂಡಲೇ ಜಾರಿಗೆ ಬರುವಂತೆ ಒಟ್ಟು 74 ಡಿವೈಎಸ್‌ಪಿ (ಸಿವಿಲ್) ಅಧಿಕಾರಿಗಳನ್ನು ವಿವಿಧ ಸ್ಥಳಗಳಿಗೆ ನಿಯೋಜಿಸಿ...

ದಾವಣಗೆರೆ

DCM: ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ: ಉದ್ಯಮಿ ಎನ್. ಬಕ್ಕೇಶ್ ಒತ್ತಾಯ

ದಾವಣಗೆರೆ:(DCM) ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಲಿಂಗಾಯತ ಸಮುದಾಯದ ಬೆಂಬಲ ಪ್ರಮುಖ ಕಾರಣವಾಗಿದ್ದು, ಮುಂಬರುವ ದಿನಗಳಲ್ಲಿ ಸಮುದಾಯದ ನಾಯಕ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು...

Related Articles
ಅಪರಾಧದಾವಣಗೆರೆ

Robbery: ದಾವಣಗೆರೆಯಲ್ಲಿ ವ್ಯಾಪಾರಿ ಅಪಹರಿಸಿ 10 ಲಕ್ಷಕ್ಕೆ ಬೇಡಿಕೆ: ಕೃತ್ಯ ಎಸಗಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು

ದಾವಣಗೆರೆ: (Robbery)  ದಾವಣಗೆರೆಯಲ್ಲಿ ಬಟ್ಟೆ ವ್ಯಾಪಾರಿಯೊಬ್ಬರನ್ನು ಹಣಕಾಸಿನ ಮಾತುಕತೆ ನೆಪದಲ್ಲಿ ಕರೆದೊಯ್ದು, ಕೊಠಡಿಯೊಂದರಲ್ಲಿ ಬಂಧಿಸಿ 10...

ದಾವಣಗೆರೆರಾಜ್ಯ / ಕರ್ನಾಟಕ

IGP: ದಾವಣಗೆರೆ ಪೂರ್ವ ವಲಯ ಐಜಿಪಿಯಾಗಿ ಎನ್. ಸತೀಶ್ ಕುಮಾರ್ ವರ್ಗಾವಣೆ

ದಾವಣಗೆರೆ: (IGP) ಕರ್ನಾಟಕ ಸರ್ಕಾರವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಂಡಿದ್ದು, ಹಿರಿಯ ಐಪಿಎಸ್ ಅಧಿಕಾರಿ...

ದಾವಣಗೆರೆರಾಜ್ಯ / ಕರ್ನಾಟಕ

Lokayukta SP: ದಾವಣಗೆರೆ ನೂತನ ಲೋಕಾಯುಕ್ತ ಎಸ್‌ಪಿಯಾಗಿ ಆ್ಯಂಟನಿ ಜಾನ್ ಅಧಿಕಾರ ಸ್ವೀಕಾರ: ದೂರು ಸಲ್ಲಿಕೆಗೆ ಕರೆ

ದಾವಣಗೆರೆ: (Lokayukta SP) ದಾವಣಗೆರೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ (ಎಸ್‌ಪಿ) ಆ್ಯಂಟನಿ ಜಾನ್ ಜೆ.ಕೆ...