ಅಪರಾಧ

Sand: ದಾವಣಗೆರೆಯಲ್ಲಿ ಮಧ್ಯರಾತ್ರಿ ಡಿಸಿ ಮನೆ ಬಳಿ ಮರಳು ಲಾರಿ ಜಪ್ತಿ: ಅಕ್ರಮ ಸಾಗಾಟ ಜಾಲ ತಡೆದ ವಿದ್ಯಾನಗರ ಪೋಲೀಸ್.!?

Share
Share

ದಾವಣಗೆರೆ: (Sand) ನಗರದಲ್ಲಿ ಅಕ್ರಮ ಮರಳು ದಂಧೆ ಮತ್ತೆ ಹೆಡೆ ಎತ್ತುತ್ತಿದೆಯೇ ಎಂಬ ಅನುಮಾನ ಮೂಡಿಸುವಂತೆ, ವಿದ್ಯಾನಗರ ಪೊಲೀಸರು ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿ ಭಾರೀ ಪ್ರಮಾಣದ ಮರಳನ್ನು ತುಂಬಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

*ಘಟನೆಯ ವಿವರ:*
ಕಳೆದ ಏಪ್ರಿಲ್ 27ರ ಸೋಮವಾರ ಮಧ್ಯರಾತ್ರಿ ಸುಮಾರು 12:10ರ ಸಮಯದಲ್ಲಿ ವಿದ್ಯಾನಗರ ಪೊಲೀಸ್ ಠಾಣೆಯ ಸಿಬ್ಬಂದಿ ರಿಂಗ್ ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಡಿಸಿ ಕಚೇರಿ ಕಡೆಯಿಂದ ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿಯನ್ನು (ನಂಬರ್: HR 69-C-1500) ಅನುಮಾನದ ಮೇಲೆ ಬೆನ್ನಟ್ಟಿದ ಪೊಲೀಸರು ನವೋದಯ ಶಾಲೆಯ ಶುದ್ಧ ನೀರಿನ ಘಟಕದ ಬಳಿ ತಡೆದು ತಪಾಸಣೆ ನಡೆಸಿದ್ದಾರೆ.

*ಪರವಾನಗಿ ಇಲ್ಲದ ಸಾಗಾಟ:*
ಲಾರಿಯನ್ನು ಪರಿಶೀಲಿಸಿದಾಗ ಅದರಲ್ಲಿ ಅಂದಾಜು 10 ಟನ್ ಮರಳು ಪತ್ತೆಯಾಗಿದೆ. ವಾಹನ ಚಾಲಕ ಸೈಯದ್ ದಾದಾಪೀರ್ @ ಚಾಂದ್ ಎಂಬಾತನನ್ನು ವಿಚಾರಿಸಿದಾಗ, ಈ ಮರಳನ್ನು ಹೊನ್ನಾಳಿ ತಾಲೂಕಿನ ಚಿಕ್ಕ ಬಾಸೂರು ಗ್ರಾಮದ ಹಳ್ಳದಿಂದ ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ಕಳ್ಳತನದಿಂದ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ನಗರಕ್ಕೆ ಮರಳನ್ನು ತರಲಾಗುತ್ತಿತ್ತು ಎಂದು ಆರೋಪಿತನು ಒಪ್ಪಿಕೊಂಡಿದ್ದಾನೆ.

*ಪೊಲೀಸ್ ಕ್ರಮ:*
ಅಂದಾಜು 10 ಲಕ್ಷ ರೂಪಾಯಿ ಮೌಲ್ಯದ ಟಿಪ್ಪರ್ ಲಾರಿ ಹಾಗೂ 20 ಸಾವಿರ ರೂಪಾಯಿ ಮೌಲ್ಯದ ಮರಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಸೈಯದ್ ದಾದಾಪೀರ್ ವಿರುದ್ಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ *BNS ಕಲಂ 303(2)* ರಡಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ನಗರದ ಹೊರವಲಯದ ರಿಂಗ್ ರಸ್ತೆಗಳು ಅಕ್ರಮ ಚಟುವಟಿಕೆಗಳ ಹಾದಿಯಾಗುತ್ತಿವೆಯೇ ಎಂಬ ಆತಂಕ ಸಾರ್ವಜನಿಕರಲ್ಲಿ ಮನೆಮಾಡಿದೆ.

ಮೂಲಗಳಿಂದ ಬಂದ ಮಾಹಿತಿ ಪ್ರಕಾರ ಆರೋಪಿ ಚಾಂದ್ ಎಂಬುವವರನ್ನು ಬಂಧಿಸಲಾಗಿದ್ದು, ನಂತರ ನ್ಯಾಯಾಲಯದ ಆದೇಶದ ಮೇರೆಗೆ ಜಾಮೀನು ಪಡೆದಿದ್ದಾರೆ ಎನ್ನಲಾಗಿದೆ, ಅಲ್ಲದೇ ಈ ವ್ಯಕ್ತಿ ಅಕ್ರಮ ಮರಳು ಸಾಗಾಟದ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಅಪರಾಧ

Sand: ದಾವಣಗೆರೆಯಲ್ಲಿ ಅಕ್ರಮ ಮರಳು ಸಾಗಾಟದ ಟಿಪ್ಪರ್ ವಶ: ಗಣಿ ಸಚಿವರ ಆಪ್ತನಿಂದ ಪೊಲೀಸರ ಮೇಲೆ ಒತ್ತಡ.?

ದಾವಣಗೆರೆ:(Sand) ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್...

ದಾವಣಗೆರೆ

DC: ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿನ ಸಮರ್ಪಕ ಸರಬರಾಜಿಗೆ ಕ್ರಮ : ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ: (DC) ಜಿಲ್ಲೆಯಲ್ಲಿ ಮುಂಗಾರು ನಿರೀಕ್ಷಿತ ಅವಧಿಯೊಳಗೆ ಆರಂಭಗೊಳ್ಳದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೆರೆ, ಕಟ್ಟೆ-ಕಾಲುವೆಗಳಲ್ಲಿ ಸಂಗ್ರಹವಾಗಿದ್ದ ನೀರು ದಿನೇದಿನೇ ಬತ್ತಿ ಹೋಗುತ್ತಿದೆ ಮಾತ್ರವಲ್ಲ ಅಂತರ್ಜಲದ ಮಟ್ಟ ಕಡಿಮೆಯಾಗಿದ್ದು, ಗ್ರಾಮೀಣ ಜನ-ಜಾನುವಾರುಗಳಿಗೆ ಉಂಟಾಗಬಹುದಾದ...

Related Articles
ಅಪರಾಧದಾವಣಗೆರೆದೇಶರಾಜ್ಯ / ಕರ್ನಾಟಕ

Pocso: ವಚನಾನಂದ ಸ್ವಾಮಿ ಪೋಕ್ಸೊ ಪ್ರಕರಣ: ಹೈಕೋರ್ಟ್ ನಲ್ಲಿ ಪ್ರಕರಣ; ಜೂನ್ 30ಕ್ಕೆ ಆದೇಶ ಮುಂದೂಡಿಕೆ

​ದಾವಣಗೆರೆ: ದಾವಣಗೆರೆ ಸ್ಥಳೀಯ ಪೋಕ್ಸೊ (POCSO) ನ್ಯಾಯಾಲಯದಲ್ಲಿ ಇಂದು ನಿಗದಿಯಾಗಿದ್ದ  ವಚನಾನಂದ ಸ್ವಾಮಿ ಅವರ ಜಾಮೀನು ರದ್ದು...

ದಾವಣಗೆರೆಅಪರಾಧ

Matka: ದಾವಣಗೆರೆ – ಹರಿಹರದಲ್ಲಿ ಅಕ್ರಮ ಚಟುವಟಿಕೆ ಹಾಗೂ ಕೆ.ಎಸ್. ಭಗವಾನ್ ಹೇಳಿಕೆ ವಿರುದ್ಧ ಶಾಸಕ ಬಿ.ಪಿ. ಹರೀಶ್ ಕಿಡಿ

ದಾವಣಗೆರೆ:(Matka) ಜಿಲ್ಲೆ ಹಾಗೂ ಹರಿಹರ ತಾಲೂಕಿನಲ್ಲಿ ಹೆಚ್ಚುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳು, ಇತ್ತೀಚೆಗೆ ನಡೆದ ವಿವಾದಾತ್ಮಕ...

ಅಪರಾಧರಾಜ್ಯ / ಕರ್ನಾಟಕ

Gambling: ಅಕ್ರಮ ಇಸ್ಪೀಟ್‌, ಓಸಿ ದಂಧೆಗೆ ಪೊಲೀಸರ ಬ್ರೇಕ್: ಜೂಜುಕೋರರ ಹೆಡೆಮುರಿ ಕಟ್ಟಲು ಖಾಕಿ ಪಡೆ ಸಜ್ಜು

ಬೆಂಗಳೂರು: (Gambling)  ರಾಜ್ಯಾದ್ಯಂತ ಅಕ್ರಮ ಇಸ್ಪೀಟ್ (ಅಂದರ್-ಬಾಹರ್) ಮತ್ತು ಓಸಿ (ಒನ್ ಚಾನ್ಸ್/ಮಟ್ಕಾ) ಜೂಜಾಟಗಳ ಹಾವಳಿ...