ನವದೆಹಲಿ:(Health) ‘ದಿ ನೇಷನ್ ಫಸ್ಟ್ ಪಾಲಿಸಿ ರಿಸರ್ಚ್ ಅಂಡ್ ಚೇಂಜ್ ಫೌಂಡೇಶನ್’ ವತಿಯಿಂದ ಸಂಸದರಿಗಾಗಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ರಾಷ್ಟ್ರಮಟ್ಟದ ಕಾರ್ಯಗಾರವು ಮೇ 25ರಂದು ದೆಹಲಿಯ ಇಂಡಿಯಾ ಹ್ಯಾಬಿಟಾಟ್ ಸೆಂಟರ್ನಲ್ಲಿ ಯಶಸ್ವಿಯಾಗಿ ಜರುಗಿತು.

ದೇಶದ ನೀತಿ ನಿರೂಪಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಜನಪ್ರತಿನಿಧಿಗಳಿಗಾಗಿ ಆಯೋಜಿಸಲಾಗಿದ್ದ ಈ ಕಾರ್ಯಗಾರದಲ್ಲಿ ಮುಖ್ಯವಾಗಿ ಮೂರು ವಿಷಯಗಳ ಮೇಲೆ ಬೆಳಕು ಚೆಲ್ಲಲಾಯಿತು:
- ಆರೋಗ್ಯ ಸುಧಾರಣೆ
- ಶೈಕ್ಷಣಿಕ ಸುಧಾರಣೆ
- ಶಾಸನಬದ್ಧ ಸಂವಹನ (Statutory Communication)
ಡಾ. ಸಿ.ಎನ್. ಮಂಜುನಾಥ್ ಅವರಿಂದ ವಿಚಾರ ಸಂಕೀರ್ಣ:
ಕಾರ್ಯಗಾರದ ಪ್ರಮುಖ ಆಕರ್ಷಣೆಯಾಗಿ, ಆರೋಗ್ಯ ಕ್ಷೇತ್ರದ ಸುಧಾರಣೆಗಳ ಕುರಿತಾದ ವಿಶೇಷ ವಿಚಾರ ಸಂಕೀರ್ಣವನ್ನು ಸಂಸದರು ಹಾಗೂ ಖ್ಯಾತ ಹೃದ್ರೋಗ ತಜ್ಞರಾದ ಡಾ. ಸಿ.ಎನ್. ಮಂಜುನಾಥ್ ಅವರು ನಡೆಸಿಕೊಟ್ಟರು. ಸಾರ್ವಜನಿಕ ಆರೋಗ್ಯದ ಸವಾಲುಗಳು ಮತ್ತು ದೇಶದ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಸದರು ವಹಿಸಬೇಕಾದ ಜವಾಬ್ದಾರಿಗಳ ಬಗ್ಗೆ ಅವರು ಸವಿಸ್ತಾರವಾಗಿ ಚರ್ಚಿಸಿದರು.
ಶಿಕ್ಷಣ ಕ್ಷೇತ್ರದಲ್ಲಿ ತರಬೇಕಾದ ಆಮೂಲಾಗ್ರ ಬದಲಾವಣೆಗಳು ಹಾಗೂ ಶಾಸನಾತ್ಮಕ ವಿಷಯಗಳಲ್ಲಿ ಸಂವಹನದ ಪ್ರಾಮುಖ್ಯತೆಯ ಕುರಿತು ವಿವಿಧ ತಜ್ಞರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ರಾಷ್ಟ್ರ ನಿರ್ಮಾಣದ ಪ್ರಕ್ರಿಯೆಯಲ್ಲಿ ಇಂತಹ ಕಾರ್ಯಗಾರಗಳು ಸಂಸದರಿಗೆ ಪೂರಕ ಮಾಹಿತಿ ಮತ್ತು ಹೊಸ ದೃಷ್ಟಿಕೋನವನ್ನು ಒದಗಿಸಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.
Leave a comment