ಅಪರಾಧದಾವಣಗೆರೆದೇಶರಾಜ್ಯ / ಕರ್ನಾಟಕವಿದೇಶ

Terrorist: ದಾವಣಗೆರೆಯಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನ: ಪಾಕ್ ಮೂಲದ ಉಗ್ರ ಸಂಘಟನೆಗೆ ನೇರ ಸಂಪರ್ಕವಿದ್ದ ಉತ್ತರ ಪ್ರದೇಶದ ಸುಹೇಲ್ ಪೋಲೀಸ್ ವಶಕ್ಕೆ

Share
Share

ದಾವಣಗೆರೆ: (Suspected Terrorist) ದಾವಣಗೆರೆ ಜಿಲ್ಲಾ ಪೊಲೀಸ್ ಮತ್ತು ಕೇಂದ್ರ ಗುಪ್ತಚರ ಇಲಾಖೆಯ (ಐಬಿ) ಅಧಿಕಾರಿಗಳು ಜಂಟಿಯಾಗಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯೊಂದಿಗೆ ನೇರ ಸಂಪರ್ಕ ಹೊಂದಿದ್ದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಪೇಂಟಿಂಗ್ ಕೆಲಸ ಮಾಡುವ ನೆಪದಲ್ಲಿ ಅಡಗಿ ಕುಳಿತಿದ್ದ ಉತ್ತರ ಪ್ರದೇಶ ಮೂಲದ ಸುಹೇಲ್ ಎಂಬಾತನೇ ಬಂಧಿತ ಶಂಕಿತ ಭಯೋತ್ಪಾದಕ.

*ಬಂಧನದ ಹಿನ್ನೆಲೆ:*
ಇತ್ತೀಚೆಗಷ್ಟೇ ರಾಜ್ಯದ ತುಮಕೂರು ಹಾಗೂ ದಾವಣಗೆರೆ ನಗರದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಪೊಲೀಸರು ಬಂಧಿಸಿದ್ದರು. ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಲಭ್ಯವಾದ ಮಹತ್ವದ ಸುಳಿವು ಮತ್ತು ಮಾಹಿತಿಯ ಆಧಾರದ ಮೇಲೆ ಸದ್ಯ ಈ ಮೂರನೇ ಶಂಕಿತ ಉಗ್ರ ಸುಹೇಲ್‌ನನ್ನು ಬನ್ನಿಕೋಡು ಗ್ರಾಮದಲ್ಲಿ ಸೆರೆಹಿಡಿಯಲಾಗಿದೆ. ಕಾರ್ಮಿಕನ ಸೋಗಿನಲ್ಲಿ ಹಳ್ಳಿಯೊಂದರಲ್ಲಿ ವಾಸವಿದ್ದ ಈತ, ಪಾಕಿಸ್ತಾನದ ಉಗ್ರಗಾಮಿ ಸಂಘಟನೆಗಳೊಂದಿಗೆ ನಿರಂತರವಾಗಿ ನೇರ ಸಂಪರ್ಕದಲ್ಲಿದ್ದ ಎನ್ನಲಾಗಿದೆ.

*ಜಂಟಿ ಕಾರ್ಯಾಚರಣೆ:*
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಶೇಖರ್ ಹೆಚ್.ಟಿ. ಅವರ ನೇರ ಮಾರ್ಗದರ್ಶನದಲ್ಲಿ, ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಡಿವೈಎಸ್ಪಿ ಬಸವರಾಜ್, ಕೇಂದ್ರೀಯ ಗುಪ್ತಚರ ವಿಭಾಗದ ಸಿಬ್ಬಂದಿ ಹಾಗೂ ದಾವಣಗೆರೆ ಅಪರಾಧ ವಿಭಾಗದ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ.

ಬಂಧನದ ಬಳಿಕ ಮುಂದಿನ ತನಿಖೆಗಾಗಿ ಶಂಕಿತ ಉಗ್ರ ಸುಹೇಲ್‌ನನ್ನು ದಾವಣಗೆರೆ, ತುಮಕೂರು ಮತ್ತು ಕೇಂದ್ರ ಗುಪ್ತಚರ ವಿಭಾಗದ ಪೊಲೀಸರು ಬಿಗಿ ಭದ್ರತೆಯೊಂದಿಗೆ ದಾವಣಗೆರೆಯಿಂದ ತುಮಕೂರು ಜಿಲ್ಲೆಗೆ ಕರೆದೊಯ್ದಿದ್ದಾರೆ. ತನಿಖೆಯ ನಂತರ ಈ ಜಾಲದ ಕುರಿತು ಇನ್ನಷ್ಟು ಆತಂಕಕಾರಿ ವಿಷಯಗಳು ಹೊರಬರುವ ಸಾಧ್ಯತೆಯಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ದಾವಣಗೆರೆ

RAIN: ಭಾರೀ ಮಳೆ ಮುನ್ಸೂಚನೆ: ಪ್ರಾಣಹಾನಿ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಕ್ಕೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಸೂಚನೆ

ದಾವಣಗೆರೆ:(RAIN)  ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಯಾವುದೇ ರೀತಿಯ ಪ್ರಾಣಾಪಾಯ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು...

ದಾವಣಗೆರೆ

Harihara: ತುಂಗಭದ್ರಾ ನದಿಯಲ್ಲಿ ಅವ್ಯಾಹತ ಅಕ್ರಮ ಮರಳು ಗಣಿಗಾರಿಕೆ; ತಡೆಯಲು ಆಗ್ರಹಿಸಿ ಕದಸಂಸ ಮನವಿ

ಹರಿಹರ:(Harihara) ತಾಲ್ಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ತುಂಗಭದ್ರಾ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಯನ್ನು ತಕ್ಷಣವೇ ನಿಲ್ಲಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು...

Related Articles
ದಾವಣಗೆರೆ

IISC: ದಾವಣಗೆರೆ ವಿಶ್ವವಿದ್ಯಾನಿಲಯ ಸಂಸ್ಥಾಪನಾ ದಿನಾಚರಣೆ ಸಾಂಸ್ಥಿಕ ಉತ್ಕೃಷ್ಟತೆಗೆ ನಾವಿನ್ಯತೆ, ಸಂಶೋಧನೆ ಅಗತ್ಯ – ಪ್ರೊ. ನವಕಾಂತ ಭಟ್

ದಾವಣಗೆರೆ: (IISC) ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ಹೊತ್ತು ಕಾರ್ಯ ನಿರ್ವಹಿಸುತ್ತಿರುವ ದಾವಣಗೆರೆ...

ಅಪರಾಧದಾವಣಗೆರೆರಾಜ್ಯ / ಕರ್ನಾಟಕ

Medical: ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ಕೋಟಿಗೂ ಹೆಚ್ಚು ಹಣ ಲೂಟಿ: ಲೋಕಾಯುಕ್ತಕ್ಕೆ ದೂರು

ಚಿತ್ರದುರ್ಗ: (Medical College) ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಸಿಎಂಸಿಆರ್‌ಐ) ನಿರ್ದೇಶಕರಾದ...

ದೇಶ

Climate: ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತು ಎನ್‌ಎಫ್‌ಪಿಆರ್‌ಸಿ ಕಾರ್ಯಾಗಾರ ಆಯೋಜನೆ

ನವದೆಹಲಿ: (Climate) ನೇಷನ್ ಫಸ್ಟ್ ಪಾಲಿಸಿ ರಿಸರ್ಚ್ ಅಂಡ್ ಚೇಂಜ್ ಫೌಂಡೇಶನ್ (NFPRC) ನವದೆಹಲಿಯ ಇಂಡಿಯಾ...

ದಾವಣಗೆರೆರಾಜ್ಯ / ಕರ್ನಾಟಕ

Minister: ದಾವಣಗೆರೆ ಜಿಲ್ಲೆಗೆ ಎರಡು ಸಚಿವ ಸ್ಥಾನ, ಮಂಕಾಳ್ ವೈದ್ಯ ಬದಲಿಗೆ ಎಸ್ ಎಸ್ ಮಲ್ಲಿಕಾರ್ಜುನ ಸಂಪುಟ ಸೇರ್ಪಡೆ

ದಾವಣಗೆರೆ: (Minister) ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ಸಂಪುಟ ಸಚಿವರನ್ನಾಗಿ ಸೇರಿಸಿಕೊಳ್ಳಲಾಗಿದೆ....