ಅಪರಾಧದಾವಣಗೆರೆರಾಜ್ಯ / ಕರ್ನಾಟಕ

PSI: ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಪಾನಮತ್ತ ಮಹಿಳೆ.!

Share
Share

ದಾವಣಗೆರೆ: (PSI) ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಪಾನಮತ್ತ ಮಹಿಳೆಯೊಬ್ಬಳು ಹಲ್ಲೆ ನಡೆಸಿ, ಅಸಭ್ಯವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಆಘಾತಕಾರಿ ಘಟನೆ ದಾವಣಗೆರೆಯ ಶಾಮನೂರು ರಸ್ತೆಯ ಬಿಂದಾಸ್ ಬಾರ್ ಮುಂಭಾಗದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಹಿಳೆಯ ವಿರುದ್ಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ:

​ದಾವಣಗೆರೆ ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ-2 ಆಗಿರುವ ಶ್ರೀಮತಿ ಶಕುಂತಲಾ (48) ಅವರು ಜೂನ್ 21ರಂದು ರಾತ್ರಿ ಎನ್‌ಆರ್‌ಒ (NRO) ಗಸ್ತು ಕರ್ತವ್ಯದಲ್ಲಿದ್ದರು. ರಾತ್ರಿ ಸುಮಾರು 11:45ರ ವೇಳೆಗೆ ಶಾಮನೂರು ಚೆಕ್ ಪೋಸ್ಟ್‌ಗೆ ಭೇಟಿ ನೀಡಿದಾಗ, ಅಲ್ಲಿನ ಸಿಬ್ಬಂದಿ ಬಿಂದಾಸ್ ಬಾರ್ ಮುಂಭಾಗದಲ್ಲಿ ಕಪ್ಪು ಬಣ್ಣದ ಥಾರ್ ಕಾರಿನಲ್ಲಿ ಮಹಿಳೆಯೊಬ್ಬಳು ಗಲಾಟೆ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

​ಮಾಹಿತಿ ಪಡೆದು ಪಿಎಸ್‌ಐ ಶಕುಂತಲಾ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದಾಗ, ಕಾರಿನಲ್ಲಿದ್ದ ಮಹಿಳೆ ಮದ್ಯಸೇವಿಸಿರುವುದು ಕಂಡುಬಂದಿದೆ. ಆಕೆಯ ಪತಿ ಕೂಡ ಜೊತೆಯಲ್ಲಿದ್ದು, ಆಕೆಯನ್ನು ಸಮಾಧಾನಪಡಿಸಲು ಯತ್ನಿಸುತ್ತಿದ್ದರು. ಪಿಎಸ್‌ಐ ಅವರು ಮಹಿಳೆಯ ಹೆಸರನ್ನು ಕೇಳಿದಾಗ, ಆಕೆ ತನ್ನ ಹೆಸರು ‘ಪ್ರೀತಿ’ ಎಂದು ಹೇಳಿ, ಪೊಲೀಸರ ವಿರುದ್ಧವೇ ಏಕವಚನದಲ್ಲಿ ಅಸಭ್ಯ ಪದಗಳಿಂದ ನಿಂದಿಸಲು ಆರಂಭಿಸಿದ್ದಾಳೆ.

ತಪಾಸಣೆಗೆ ಹೋದಾಗ ಹಲ್ಲೆ:

​ಮಹಜರು ಸ್ಥಳಕ್ಕೆ ಹೆಚ್ಚುವರಿ ಸಂಚಾರ ಪೊಲೀಸ್ ಸಿಬ್ಬಂದಿ ಆಗಮಿಸಿ ಮಹಿಳೆಯನ್ನು ಸಮಾಧಾನಪಡಿಸಲು ಯತ್ನಿಸಿದರೂ ಆಕೆ ಸಾರ್ವಜನಿಕರ ಹಾಗೂ ಪೊಲೀಸರ ವಿರುದ್ಧ ಕೂಗಾಡುವುದನ್ನು ಮುಂದುವರಿಸಿದ್ದಾಳೆ. ಈ ವೇಳೆ ಪಿಎಸ್‌ಐ ಶಕುಂತಲಾ ಅವರು ತಮ್ಮ ಬಳಿ ಇದ್ದ ‘ಡ್ರಂಕ್ ಅಂಡ್ ಡ್ರೈವ್’ ತಪಾಸಣಾ ಯಂತ್ರದಿಂದ ಮಹಿಳೆಯನ್ನು ಪರೀಕ್ಷಿಸಲು ಮುಂದಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರೀತಿ, “ನನ್ನನ್ನು ಚೆಕ್ ಮಾಡಲು ನೀನು ಯಾರು?” ಎಂದು ಕೂಗಾಡಿ, ಪಿಎಸ್‌ಐ ಕೈಯಲ್ಲಿದ್ದ ತಪಾಸಣಾ ಯಂತ್ರವನ್ನು ಕೆಳಗೆ ತಳ್ಳಿ, ಪಿಎಸ್‌ಐ ಅವರ ಹೊಟ್ಟೆಗೆ ಬಲಗಾಲಿನಿಂದ ಜೋರಾಗಿ ಒದ್ದಿದ್ದಾಳೆ.

​ಹಲ್ಲೆಯಿಂದಾಗಿ ಜೀಪಿನ ಪಕ್ಕಕ್ಕೆ ಸರಿದು ಸುಧಾರಿಸಿಕೊಂಡ ಪಿಎಸ್‌ಐ ಅವರನ್ನು ಸಾರ್ವಜನಿಕರು ಮತ್ತು ಸಿಬ್ಬಂದಿ ಜೀಪಿನಲ್ಲಿ ಕೂರಿಸಿದ್ದಾರೆ. ಈ ಗೊಂದಲದ ನಡುವೆ ಆರೋಪಿ ಮಹಿಳೆ ಮದ್ಯಪಾನ ತಪಾಸಣೆಗೆ ಒಳಪಡದೆ, ಸ್ಥಳದಿಂದ ಬೇರೊಂದು ಕಾರಿನಲ್ಲಿ ಪರಾರಿಯಾಗಿದ್ದಾಳೆ.

ಪೊಲೀಸರ ಕ್ರಮ:

​ಘಟನೆಯ ನಂತರ ಆರೋಪಿಗಳು ಬಿಟ್ಟು ಹೋಗಿದ್ದ KA 02 MU 2444 ನೋಂದಣಿ ಸಂಖ್ಯೆಯ ಕಪ್ಪು ಬಣ್ಣದ ಥಾರ್ ಕಾರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ತಂದಿರಿಸಿದ್ದಾರೆ. ನಂತರ ಅರೋಪಿ ಮಹಿಳೆ ಅದೇ ದಿನ ರಾತ್ರಿ ಜಾಮೀನು ಪಡೆದುಕೊಂಡಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

ಹಲ್ಲೆಗೊಳಗಾದ ಪಿಎಸ್‌ಐ ಶಕುಂತಲಾ ಅವರು ದಾವಣಗೆರೆಯ ಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಕರ್ತವ್ಯ ಮುಗಿಸಿ ವಿಶ್ರಾಂತಿ ಪಡೆದ ನಂತರ ಪಿಎಸ್‌ಐ ಅವರು ಜೂನ್ 22ರ ಮಧ್ಯಾಹ್ನ ವಿದ್ಯಾನಗರ ಪೊಲೀಸ್ ಠಾಣೆಗೆ ಹಾಜರಾಗಿ ಲಿಖಿತ ದೂರು ನೀಡಿದ್ದಾರೆ. ಪೊಲೀಸರು ಆರೋಪಿ ಪ್ರೀತಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 2023 ರ ಕಲಂ 121(1), 132, ಮತ್ತು 352 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಲು ದಾವಣಗೆರೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸಿರುವುದಿಲ್ಲ.

Share

Leave a comment

Leave a Reply

Your email address will not be published. Required fields are marked *

Don't Miss

ದಾವಣಗೆರೆ

RAIN: ಭಾರೀ ಮಳೆ ಮುನ್ಸೂಚನೆ: ಪ್ರಾಣಹಾನಿ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಕ್ಕೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಸೂಚನೆ

ದಾವಣಗೆರೆ:(RAIN)  ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಯಾವುದೇ ರೀತಿಯ ಪ್ರಾಣಾಪಾಯ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು...

ದಾವಣಗೆರೆ

Harihara: ತುಂಗಭದ್ರಾ ನದಿಯಲ್ಲಿ ಅವ್ಯಾಹತ ಅಕ್ರಮ ಮರಳು ಗಣಿಗಾರಿಕೆ; ತಡೆಯಲು ಆಗ್ರಹಿಸಿ ಕದಸಂಸ ಮನವಿ

ಹರಿಹರ:(Harihara) ತಾಲ್ಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ತುಂಗಭದ್ರಾ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಯನ್ನು ತಕ್ಷಣವೇ ನಿಲ್ಲಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು...

Related Articles
ದಾವಣಗೆರೆ

IISC: ದಾವಣಗೆರೆ ವಿಶ್ವವಿದ್ಯಾನಿಲಯ ಸಂಸ್ಥಾಪನಾ ದಿನಾಚರಣೆ ಸಾಂಸ್ಥಿಕ ಉತ್ಕೃಷ್ಟತೆಗೆ ನಾವಿನ್ಯತೆ, ಸಂಶೋಧನೆ ಅಗತ್ಯ – ಪ್ರೊ. ನವಕಾಂತ ಭಟ್

ದಾವಣಗೆರೆ: (IISC) ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ಹೊತ್ತು ಕಾರ್ಯ ನಿರ್ವಹಿಸುತ್ತಿರುವ ದಾವಣಗೆರೆ...

ಅಪರಾಧದಾವಣಗೆರೆರಾಜ್ಯ / ಕರ್ನಾಟಕ

Medical: ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ ಕೋಟಿಗೂ ಹೆಚ್ಚು ಹಣ ಲೂಟಿ: ಲೋಕಾಯುಕ್ತಕ್ಕೆ ದೂರು

ಚಿತ್ರದುರ್ಗ: (Medical College) ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಸಿಎಂಸಿಆರ್‌ಐ) ನಿರ್ದೇಶಕರಾದ...

ದಾವಣಗೆರೆರಾಜ್ಯ / ಕರ್ನಾಟಕ

Minister: ದಾವಣಗೆರೆ ಜಿಲ್ಲೆಗೆ ಎರಡು ಸಚಿವ ಸ್ಥಾನ, ಮಂಕಾಳ್ ವೈದ್ಯ ಬದಲಿಗೆ ಎಸ್ ಎಸ್ ಮಲ್ಲಿಕಾರ್ಜುನ ಸಂಪುಟ ಸೇರ್ಪಡೆ

ದಾವಣಗೆರೆ: (Minister) ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ಸಂಪುಟ ಸಚಿವರನ್ನಾಗಿ ಸೇರಿಸಿಕೊಳ್ಳಲಾಗಿದೆ....