ಅಪಘಾತದಲ್ಲಿ ದಂಪತಿ, ಮಕ್ಕಳು ಸೇರಿ ನಾಲ್ವರು ದುರ್ಮರಣ

ಅಪಘಾತದಲ್ಲಿ ದಂಪತಿ, ಮಕ್ಕಳು ಸೇರಿ ನಾಲ್ವರು ದುರ್ಮರಣ
ಹಾಸನ: ಟ್ಯಾಕ್ಟರ್ ಹಾಗೂ ದ್ವಿಚಕ್ರ ನಡುವಿನ ಅಪಘಾತದಲ್ಲಿ ದಂಪತಿ, ಮಕ್ಕಳು ಸೇರಿ 4 ಜನ ಮೃತಪಟ್ಟ ಘಟನೆ ನಡೆದಿದೆ.
ಇಲ್ಲಿನ ತಿಪಟೂರು ಮುಖ್ಯ ರಸ್ತೆಯ ನವಿಲೇ ಗೇಟ್ ಬಳಿ ಶನಿವಾರ ರಾತ್ರಿ ಟ್ಯಾಕ್ಟರ್ ಹಾಗೂ ದ್ವಿಚಕ್ರ ನಡುವೆ ಈ ಅಪಘಾತ ಸಂಭವಿಸಿದೆ.
ಮೂಲತ ತಿಪಟೂರು ತಾಲೂಕಿನ ಎಡಗರಹಳ್ಳಿ ಗ್ರಾಮದ ಯೋಗೇಶ್ ಆಚಾರಿ (35) ಅವರ ಪತ್ನಿ ಲಕ್ಷ್ಮಿ(27) ಹಾಗೂ ಯೋಗೇಶ್ ಆಚಾರಿ ತಂಗಿಯ ಮಕ್ಕಳಾದ ಗಾನವಿ(12) ತೇಜು(4) ಮೃತಪಟ್ಟಿರುವ ದುರ್ದೈವಿಗಳು.
ಇವರು ಅನೇಕ ವರ್ಷಗಳಿಂದ ನವಿಲೇ ಗೇಟ್ ನಲ್ಲಿ ವಾಸವಾಗಿದ್ದರು. ಶನಿವಾರ ತಮ್ಮ ಹುಟ್ಟೂರಿನಿಂದ ನವಲೆ ಗೇಟ್ ಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಡೀಸೆಲ್ ಖಾಲಿಯಾದ ಹಿನ್ನೆಲೆಯಲ್ಲಿ ಟ್ಯಾಕ್ಟರ್ ಅನ್ನು ಚಾಲಕ ಅಜಾಗರೂಕತೆಯಿಂದ ನಡು ರಸ್ತೆಯ ಮೇಲೆ ಬಿಟ್ಟು ಹೋಗಿದ್ದರಿಂದ ಈ ಅಪಘಾತ ನಡೆದಿದೆ. ಈ ಸಂಬಂಧ ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.