ಕೆಎಸ್ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

ಕೆಎಸ್ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ
ಬೆಂಗಳೂರು: ಲಂಚ ಸ್ವೀರಿಸುತ್ತಿದ್ದ ವೇಳೆ ಲೋಕಾಯುಕ್ತ (lokayukta)ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಪ್ರಶಾಂತ್ಗೆ 14 ದಿನ ನ್ಯಾಯಾಂಗ ಬಂಧನವಾಗಿದೆ. ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ, ಕೆಎಸ್ಡಿಎಲ್ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಟೆಂಡರ್ವೊಂದಕ್ಕೆ ಸಂಬಂಧಿಸಿದಂತೆ 80 ಲಕ್ಷ ಕಮಿಷನ್ ಕೇಳಿದ್ದರು.
ಈ ಪೈಕಿ ಮುಂಗಡವಾಗಿ ಪ್ರಶಾಂತ್ 40 ಲಕ್ಷ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದರು. ಬಳಿಕ BWSSB ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಕಚೇರಿ ಮತ್ತು ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದರು. ಈ ವೇಳೆ ಬರೊಬ್ಬರಿ ಒಟ್ಟು 7 ಕೋಟಿ 62 ಲಕ್ಷ ರೂ. ಹಣ ಪತ್ತೆಯಾಗಿದೆ. ಹಾಗೇ ಪ್ರಶಾಂತ್ ಮಾಡಾಳ್ ಸೇರಿ ಐವರನ್ನು ಬಂಧಿಸಲಾಗಿತ್ತು.