ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಅನುದಾನ ಹೆಚ್ಚಿಸಿ – ವಾಲ್ಮೀಕಿ ಸಮಾಜದಿಂದ ಮನವಿ

ದಾವಣಗೆರೆ: ಜು.2: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಅನುದಾನ ಹೆಚ್ಚಿಸುವಂತೆ ನಾಯಕ ಸಮಾಜದಿಂದ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಸರ್ಕಾರವು ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಕೇವಲ 47 ಕೋಟಿ ಅನುದಾನ ನೀಡಿದ್ದು, ಪ್ರಸಕ್ತ ಅನುದಾನ ರಾಜ್ಯಾದ್ಯಂತ ಇರುವ ಪರಿಶಿಷ್ಟ ಪಂಗಡದ ಜನಾಂಗಕ್ಕೆ ಸಾಲುವುದಿಲ್ಲ. ಆದ್ದರಿಂದ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಆದಿಜಾಂಬವ ಅಭಿವೃದ್ಧಿ ನಿಗಮಗಳಿಗೆ ಹೆಚ್ಚುವರಿಯಾಗಿ ತಲಾ 150 ಕೋಟಿ ರೂ., ನೀಡಿರುವಂತೆ ನಮ್ಮ ಸಮಾಜಕ್ಕೂ ಹೆಚ್ಚು ಅನುದಾನ ನೀಡಬೇಕೆಂದು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ನಾಯಕ ಸಮುದಾಯದ ಯುವ ಮುಖಂಡರಾದ ಎನ್.ಎಚ್. ಹಾಲೇಶ್ ಹಾಗೂ ಪಿ.ಬಿ. ಅಂಜು ಕುಮಾರ್, ನಿಟ್ಟೂರು ಅಜಯ್, ಸಿದ್ದೇಶ್ ಮತ್ತಿತರರು ಉಪಸ್ಥಿತರಿದ್ದರು.