ಪಕ್ಷಾಂತರ ಪರ್ವ: ‘ಕೈ’ ಹಿಡಿದ ಕಮಲ ನಾಯಕರು

Defection festival: Lotus leaders holding hands

ಪಕ್ಷಾಂತರ ಪರ್ವ: ‘ಕೈ’ ಹಿಡಿದ ಕಮಲ ನಾಯಕರು

ಬೆಂಗಳೂರು :ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಗರಿಗೆದರಿದೆ. ಬೆಂಗಳೂರಿನಲ್ಲಿಂದು ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬಿಜೆಪಿ ಮಾಜಿ ಶಾಸಕರಾದ ಕೊಳ್ಳೇಗಾಲದ ನಂಜುಂಡಸ್ವಾಮಿ, ಬಿಜಾಪುರದ ಮನೋಹರ್ ಐನಾಪುರ ಹಾಗೂ ಮೈಸೂರು ಮಾಜಿ ಮೇಯರ್ ಪುರುಷೋತ್ತಮ್ ಅವರು ತಮ್ಮ ಬೆಂಬಲಿಗರ ಜತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವನಾರಾಯಣ್, ಸಲೀಮ್ ಅಹ್ಮದ್, ಕೆಪಿಸಿಸಿ ಸಂವಹನ ಮತ್ತು ಜಾಲತಾಣ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ, ಮಾಜಿ ಶಾಸಕ ಬಾಲರಾಜ್ ಮೊದಲಾದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!