1 ಲಕ್ಷ ಸೀಡ್ ಬಾಲ್ ತಯಾರಿಸಲು ಮುಂದಾದ ಜಿಲ್ಲಾ ಬಿಜೆಪಿ ಯುವ ಮೊರ್ಚಾ

IMG-20210707-WA0005

 ದಾವಣಗೆರೆ: ಬಿಜೆಪಿ ಜಿಲ್ಲಾ ಯುವ ಮೋರ್ಚಾದ ವತಿಯಿಂದ 1 ಲಕ್ಷ ಸೀಡ್‌ಬಾಲ್ (ಬೀಜದುಂಡೆ)ಗಳನ್ನು ನಗರದ ಜಿ.ಎಂ.ಐ.ಟಿ. ಕಾಲೇಜಿನ ಆವರಣದಲ್ಲಿ ನಾಲ್ಕುದಿನಗಳೊಳಗಾಗಿ ತಯಾರಿಸಲಾಗುವುದು ಎಂದು ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಮತ್ತು ಪಾಲಿಕೆ ಸದಸ್ಯ ಆರ್.ಎಲ್. ಶಿವಪ್ರಕಾಶ್ ಹೇಳಿದರು.

ಬುಧವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಯುವ ಮೋರ್ಚಾದ ವತಿಯಿಂದ ಬೀಜದುಂಡೆ ತಯಾರಿಸುವ ಕುರಿತು ನಡೆಸಲಾದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಈ ಕಾರ್ಯದಲ್ಲಿ ಎಲ್ಲಾ ಸಾರ್ವಜನಿಕರು ಹಾಗೂ ಪರಿಸರಮಿತ್ರರು ಪಕ್ಷಬೇಧ ಮರೆತು ಭಾಗವಹಿಸಬೇಕೆಂದು ಕರೆ ನೀಡಿದರು.
ಈ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್, ಕೋವಿಡ್ ನಿಂದಾಗಿ ಈಗಾಗಲೇ ಸುಮಾರು ಜನರು ಉಸಿರಾಟದ ತೊಂದರೆಯಿಂದ ಮರಣ ಹೊಂದಿದ್ದು, ಈ ಸಂಕಷ್ಟದ ಸಮಯದಲ್ಲಿ ಪರಿಸರದ ಹಿತದೃಷ್ಟಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಎಲ್ಲಾ ಸಾರ್ವಜನಿಕರು ಮಾಡಬೇಕಾಗಿ ಮನವಿ ಮಾಡಿದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಮಾತನಾಡಿ, ಸೀಡ್‌ಬಾಲ್ ಮಾಡುವುದರ ಜೊತೆಗೆ ಜಿಲ್ಲೆಯಾದ್ಯಂತ ಸಸಿಗಳನ್ನು ನೆಟ್ಟು, ಅದನ್ನು ಕನಿಷ್ಠ 3 ವರ್ಷದವರೆಗೆ ನೀರು ಹಾಕಿ ಆರೈಕೆ ಮಾಡಿದಾಗ ಮಾತ್ರ ಈ ಕಾರ್ಯಕ್ರಮ ಯಶಸ್ವಿಗೊಳ್ಳುವುದು. ಸಾರ್ವಜನಿಕರಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಯಲ್ಲೇಶ್, ಉಪಾಧ್ಯಕ್ಷರಾದ ಚೇತನ್, ಗುರುರಾಜ್, ಕಾರ್ಯದರ್ಶಿಗಳಾದ ಪ್ರಶಾಂತ್, ಯೋಗಾನಂದ, ತಿಲಕ್, ರಾಕೇಶ್, ಸಚಿನ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!