Acb Raid: ರಾಜ್ಯಾದ್ಯಂತ ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ ಎಸಿಬಿ: ದಾವಣಗೆರೆಯಲ್ಲಿ ಯಾವ ಅಧಿಕಾರಿ ಮನೆ ರೇಡ್ ಗೊತ್ತಾ.?

ದಾವಣಗೆರೆ: ಆದಾಯಕ್ಕೂ ಮೀರಿ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಇಂದು ಬೆಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ರಾಜ್ಯದಾದ್ಯಂತ ಏಕಕಾಲಕ್ಕೆ 40 ಕಡೆ ಎಸಿಬಿ ಅಧಿಕಾರಿಗಳ ತಂಡ ಭ್ರಷ್ಟ ಅಧಿಕಾರಿಗಳ ಮನೆ ಕಚೇರಿ ತೋಟದ ಮನೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಆಸ್ತಿ ಹಾಗೂ ಹಣದ ದಾಖಲೆಗಳನ್ನು ಕಲೆಹಾಕುತ್ತಿದ್ದಾರೆ.
ದಾವಣಗೆರೆಯಲ್ಲಿಯೂ ಬೆಳಗ್ಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಸ್ತುತ ಕೋಲಾರದ ಮಾಲೂರಿನಲ್ಲಿ ನಗರ ಯೋಜನೆ ಸಹಾಯಕ ನಿರ್ದೇಶಕರಾಗಿರುವ ಹೆಚ್.ಆರ್ ಕೃಷ್ಣಪ್ಪ ಅವರ ದಾವಣಗೆರೆ ನಿವಾಸ ಹಾಗೂ ಚನ್ನಗಿರಿ ತಾಲೂಕಿನ ದೇವರಹಳ್ಳಿ, ನುಗ್ಗಿಹಳ್ಳಿ ಗ್ರಾಮದ ಮನೆ ಮೇಲೆ ದಾಳಿ ನಡೆಸಿದ್ದಾರೆ. ಕೃಷ್ಣಪ್ಪ ಅವರು ಮೂಲತಃ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದವರಾಗಿದ್ದು ದಾವಣಗೆರೆಯಲ್ಲಿ ವಾಸವಿದ್ದರು ಎನ್ನಲಾಗಿದೆ. ಐಷಾರಾಮಿ ಬಂಗ್ಲೆ ಹಾಗೂ ದೇವರಹಳ್ಳಿ ಗ್ರಾಮದಲ್ಲಿ ತೋಟ ಸೇರಿದಂತೆ ಅಪಾರ ಪ್ರಮಾಣದಲ್ಲಿ ಆಸ್ತಿ ಹೊಂದಿದ್ದಾರೆ ಎಂಬ ಆರೋಪದಡಿ ದಾಖಲೆಗಳನ್ನು ಪರಿಶೀಲನೆಯನ್ನ ಎಸಿಬಿ ಅಧಿಕಾರಿಗಳು ಮಾಡುತ್ತಿದ್ದಾರೆ.