ಡಿಕೆಶಿ ಸ್ವಾಗತಕ್ಕೆ ಕೊವಿಡ್ ಮಾರ್ಗಸೂಚಿ ಉಲ್ಲಂಘನೆ: ಮಾಸ್ಕ್ ಇಲ್ಲ, ಅಂತರವಿಲ್ಲ ಜಾತ್ರೆಯಂತೆ ಸೇರಿದ ಕಾರ್ಯಕರ್ತರು

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದಾವಣಗೆರೆ ಆಗಮಿಸಿದ ವೇಳೆ ಪಕ್ಷದ ಕಾರ್ಯಕರ್ತರು, ಮುಖಂಡರು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಆದರೆ, ಅಲ್ಲಿ ನೆರೆದಿದ್ದವರು ಕೋವಿಡ್ ಮಾರ್ಗಸೂಚಿಯನ್ನು ಗಾಳಿಗೆ ತೂರಿ ಜಾತ್ರೆಯ ರೀತಿ ಸೇರಿದ್ದು ಕಂಡುಬಂದಿದೆ.
ಕೆಲವರು ಸರಿಯಾಗಿ ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಗಾಳಿಗೆ ತೂರಿ ಡಿಕೆಶಿಯನ್ನು ಜಿಲ್ಲೆಗೆ ಅದ್ಧೂರಿಯಾಗಿ ಸ್ವಾಗತಿಸಿದರು.
ದಾವಣಗೆರೆ ಗಡಿಭಾಗವಾದ ಲಕ್ಕಮುತ್ತೇನಹಳ್ಳಿ ಗ್ರಾಮದ ಬಳಿ ಮಾಯಕೊಂಡ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಕೆ.ಎಸ್.ಬಸವಂತಪ್ಪ ನೇತೃತ್ವದಲ್ಲಿ ಮತ್ತು ರಾಷ್ಟ್ರೀಯ ಹೆದ್ದಾರಿ ಬಳಿಯ ಅಪೂರ್ವ ಹೋಟೆಲ್ ಹತ್ತಿರ ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಶಿವಗಂಗಾ ಬಸವರಾಜ್ ಅವರ ನೇತೃತ್ವದಲ್ಲಿ ಕೆಪಿಸಿಸಿ ವಕ್ತಾರ ಡಿ. ಬಸವರಾಜ್, ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರ ಗಿರೀಶ್ ಸೇರಿದಂತೆ ಕಾಂಗ್ರೆಸ್ ಮುಖಂಡರುಗಳು, ಕಾರ್ಯಕರ್ತರು ಅಭಿಮಾನಿಗಳು ಅದ್ದೂರಿಯಾಗಿ ಅವರನ್ನು ಸ್ವಾಗತಿಸಿದರು.