ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಲು ಮನವಿ

IMG-20210716-WA0009

 

ದಾವಣಗೆರೆ.ಜು.೧೬: ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಆಗದ ರೀತಿಯಲ್ಲಿ ಹಾಸ್ಟೆಲ್ ಸೌಲಭ್ಯಗಳನ್ನು ಒದಗಿಸಿ ಪರೀಕ್ಷೆಯನ್ನು ನಡೆಸಬೇಕೆಂದು ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ದಾವಣಗೆರೆ ವಿಶ್ವ ವಿದ್ಯಾನಿಲಯದ  ಆಡಳಿತ ಕುಲಸಚಿವರಿಗೆ  ಮನವಿ ಸಲ್ಲಿಸಲಾಯಿತು.

ಕೊರೋನಾದಂತಹ ಪರಿಸ್ಥಿತಿಯನ್ನು ಜನಸಾಮಾನ್ಯರು ಹಾಗೂ ವಿದ್ಯಾರ್ಥಿ ಸಮುದಾಯವು ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಸಮಸ್ಯೆ ಎದುರಿಸಿದ್ದಾರೆ. ಅದರ ಜೊತೆ ಜೊತೆಯಲ್ಲಿ ಶೈಕ್ಷಣಿಕವಾಗಿ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದ್ದಾರೆ. ಮೊದಲನೇ ಅಲೆಯಲ್ಲಿ ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ಶಿಕ್ಷಣವನ್ನು ಪಡೆದು ಪರೀಕ್ಷೆಯನ್ನು ಬರೆದಿದ್ದಾರೆ. ಎರಡನೇ ಅಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಸಾಕಷ್ಟು ಆರ್ಥಿಕವಾದ ಸಮಸ್ಯೆಗಳು ಉಂಟಾಗಿದ್ದು ಇದರಿಂದಾಗಿ ವಿದ್ಯಾರ್ಥಿಗಳು ಕೆಲವರು ಶಿಕ್ಷಣವನ್ನು ತೊರೆಯುವಂತಹ ಸಂದರ್ಭಗಳು ಉಂಟಾಗಿವೆ ಹಾಗೂ ಎರಡನೇ ಅಲೆಯಲ್ಲಿ ಶಿಕ್ಷಣವನ್ನು ಆನ್ ಲೈನ್ ನಲ್ಲಿ ಪಡೆದುಕೊಂಡು, ಈಗ ಪರೀಕ್ಷೆಯನ್ನು ಎದುರಿಸಲು ಸಿದ್ಧರಾಗಿದ್ದಾರೆ.ಇಂತಹ ಸಂದರ್ಭದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯಗಳನ್ನು ನೀಡದಿದ್ದರೆ ವಿದ್ಯಾರ್ಥಿಗಳನ್ನು ಆರ್ಥಿಕವಾಗಿ ಇನ್ನಷ್ಟು ಕಷ್ಟದ ಕೂಪಕ್ಕೆ ತಳ್ಳಿದಂತಾಗುತ್ತದೆ.ಆದ್ದರಿಂದ  ವಿದ್ಯಾರ್ಥಿಗಳ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಹಾಸ್ಟೆಲ್  ಸೌಲಭ್ಯವನ್ನು ಒದಗಿಸಬೇಕೆಂದು ಆಡಳಿತ ಕುಲಸಚಿವರಿಗೆ ಮನವಿಯನ್ನು ಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಜೇಂದ್ರ ಬಾಯಾರ್,  ವಿವಿ ಯ ವಿದ್ಯಾರ್ಥಿಗಳಾದ ಸತೀಶ್,ರವೀಂದ್ರ,ನಾಗರಾಜ್ ,ಮತ್ತಿತರರಿದ್ದರು.

Leave a Reply

Your email address will not be published. Required fields are marked *

error: Content is protected !!