ಬಿಜೆಪಿ ರಾಜ್ಯಾದ್ಯಕ್ಷರ ಆಡಿಯೋ ಬಗ್ಗೆ ರೇಣುಕಾಚಾರ್ಯ ಏನು ಹೇಳಿದ್ರು ಗೊತ್ತಾ.? ಈ ಸುದ್ದಿ ಓದಿ ಶೇರ್ ಮಾಡಿ

ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಳಂಕ ತರಲು ಕಾಂಗ್ರೆಸ್ನವರು ಷಡ್ಯಂತ್ರ ಮಾಡಿದ್ದಾರೆ. ಆಡೀಯೋದಲ್ಲಿರುವುದು ಕಟೀಲ್ ಅವರ ಧ್ವನಿಯಲ್ಲ ಅದು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಬಿ.ಎಸ್. ಯಡಿಯೂರಪ್ಪ ನಾಯಕತ್ವ ಬದಲಾವಣೆ ಹಾಗೂ ಜಗದೀಶ್ ಶೆಟ್ಟರ್ ಮತ್ತು ಕೆ.ಎಸ್. ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡಲಾಗುವ ವಿಚಾರದ ಬಗ್ಗೆ ಹರಿದಾಡುತ್ತಿರುವ ಆಡಿಯೋದ ಧ್ವನಿ ನಳೀನ್ ಕುಮಾರ್ ಕಟೀಲ್ ಅವರದ್ದು ಎನ್ನಲಾಗುತ್ತಿರುವ ವಿಚಾರ ಕುರಿತು ಅವರು ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅಭಿಪ್ರಾಯ ಹೇಳಿದರು.
ಒಬ್ಬ ಸಾಮಾನ್ಯ ಕಾರ್ಯಕರ್ತರಾಗಿ ನಂತರ ಸಂಸದರಾಗಿ, ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಕಟೀಲ್ ಅವರು ಪಕ್ಷ ಸಂಘಟನೆಯಲ್ಲಿ ಅವರಿಗಿರುವ ಚತುರತೆಯನ್ನು ಕಂಡು ಸಹಿಸದವರು ಆ ರೀತಿ ಆಡೀಯೋ ಸೃಷ್ಟಿಸಿದ್ದಾರೆ. ಇದರಲ್ಲಿ ಕಾಂಗ್ರೆಸ್ ನವರ ಕೈವಾಡವಿದೆ ಎಂದು ಆರೋಪಿಸಿದರು.
ನಳೀನ್ ಕುಮಾರ್ ಕಟೀಲ್ ಅಧ್ಯಕ್ಷರಾದ ಮೇಲೆ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ, ಸಾಮಾನ್ಯ ಕಾರ್ಯಕರ್ತರನ್ನು ಕೂರಿಸಿ ಮಾತನಾಡುವಷ್ಟು ಸೌಜನ್ಯ ತೋರುತ್ತಾರೆ. ಬಿಎಸ್ವೈ ನಾಯಕತ್ವದಲ್ಲಿ ಬದಲಾವಣೆ ಇಲ್ಲ ಎಂದು ಸ್ಪಷ್ಟವಾಗಿ ಅವರು ಹೇಳಿದ್ದರು. ಯಡಿಯೂರಪ್ಪ ಅವರ ನಾಯಕತ್ವದ ಬಗ್ಗೆ ಮಾತನಾಡುತ್ತಿದ್ದ ಕೆಲವರಿಗೆ ಅವರು ನೋಟಿಸ್ ನೀಡಿದ್ದಾರೆ.
ಕಾಂಗ್ರೆಸ್ ಒಡೆದ ಮನೆಯಂತಾಗಿದೆ. ಕಾಂಗ್ರೆಸ್ನವರಿಗೆ ತಾವು ಅಧಿಕಾರಕ್ಕೆ ಬರುವುದಿಲ್ಲ ಎಂದು ಸ್ಪಷ್ಟವಾಗಿ ಗೊತ್ತಾಗಿದೆ. ಹಾಗಾಗಿ, ನಳೀನ್ ಕುಮಾರ್ ಕಟೀಲ್ ಪಕ್ಷ ಸಂಘಟನೆ ಮಾಡಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತಾರೆ ಎಂದು ಕಾಂಗ್ರೆಸ್ ನವರು ಮಾಡಿದ ಕುತಂತ್ರವಿದು. ಕುತಂತ್ರ ಯಾವುದೇ ಕಾರಣಕ್ಕೂ ನಡೆಯಲ್ಲ. ನಳೀನ್ ಕುಮಾರ್ ಕಟೀಲ್ ಅಧ್ಯಕ್ಷರಾಗಿ ಪ್ರವಾಸ ಮಾಡಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುತ್ತಾರೆ ಎಂದು ಚಾಟಿ ಬೀಸಿದರು.
ಕಟೀಲ್ ಅವರು ಮತ್ತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಕೈಗೊಂಡು ಪಕ್ಷ ಸಂಘಟನೆ ಮಾಡುತ್ತಾರೆ. ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುತ್ತಾರೆ. ಅವರೊಂದಿಗೆ ನಾವು ಸದಾ ಇರುತ್ತೇವೆ ಎಂದರು.