ಜುಲೈ 26 ರ ಪರೀಕ್ಷೆ ಮೂಂದುಡಿದ ದಾವಣಗೆರೆ ವಿವಿ : ಹೋರಾಟ ನಿಲ್ಲಿಸಿದ ವಿದ್ಯಾರ್ಥಿಗಳು

ದಾವಣಗೆರೆ.ಜು.೨೩; ಸೆಮಿಸ್ಟರ್ ಪರೀಕ್ಷೆ ಮುಂದೂಡಬೇಕೆಂದು ಒತ್ತಾಯಿಸಿದ್ದ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ದಾವಣಗೆರೆ ವಿವಿ ಪರೀಕ್ಷೆ ಮುಂದೂಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದಿದ್ದಾರೆ.
ಎಐಡಿಎಸ್ಓ ದಾವಣಗೆರೆ ಜಿಲ್ಲಾ ಸಮಿತಿಯು ಹಾಗೂ ವಿದ್ಯಾರ್ಥಿಗಳ ಹೋರಾಟ ಸಮಿತಿಯು ದಾವಣಗೆರೆ ವಿಶ್ವವಿದ್ಯಾಲಯದ ಮಾನ್ಯ ಉಪಕಲಪತಿಗಳು ಪ್ರೊ.ಶರಣಪ್ಪ ಹಲಸೆಯವರಿಗೆ ಸಾಮೂಹಿಕ ನಿಯೋಗ ತೆರಳಿದ್ದ ಹಿನ್ನೆಲೆಯಲ್ಲಿ ಜುಲೈ 26ರಿಂದ ಪ್ರಾರಂಭವಾಗಬೇಕಿದ್ದ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗುವುದು ಎಂದು ದೂರವಾಣಿ ಮೂಲಕ ಉಪಕುಲಪತಿಗಳು ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು. ಅಲ್ಲದೆ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದ ನಂತರ, ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿ ಪರ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ. ಉಪಕುಲಪತಿಗಳ ನಿರ್ದೇಶನದ ಆಧಾರದ ಮೇಲೆ ಕುಲಸಚಿವರು ಅದನ್ನು ಲಿಖಿತವಾಗಿ ನೀಡಿದ್ದಾರೆ. ಆದ್ದರಿಂದ ಹೊರಾಟ ಹಿಂಪಡೆಯಲಾಗಿದೆ ಎಂದು ಎ ಐ ಡಿ ಎಸ್ ಒ ಜಿಲ್ಲಾ ಕಾರ್ಯದರ್ಶಿ
ಪೂಜಾ ನಂದಿಹಳ್ಳಿ ತಿಳಿಸಿದ್ದಾರೆ.