ಕೋವಿಡ್ ಮೂರನೇ ಅಲೆಯ ಮುನ್ಸೂಚನೆ.! ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರವೇಶಾತಿ ಮುಂದೂಡಿದ ಸರ್ಕಾರ

ದಾವಣಗೆರೆ: ಎಲ್ಲಾ ಸರ್ಕಾರಿ ಹಾಗೂ ಖಾಸಗಿ, ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆಯನ್ನು ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇತ್ತೀಚೆಗಷ್ಟೇ ಸರ್ಕಾರ ಆ.4 ರಿಂದ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸೂಚಿಸಿತ್ತು. ಆದರೆ, ಸಂಭಾವ್ಯ ಕೋವಿಡ್ ಮೂರನೇ ಅಲೆಯ ಮುನ್ಸೂಚನೆ ಇರುವ ಕಾರಣದಿಂದಾಗಿ ಆದೇಶವನ್ನು ಮುಂದೂಡಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಾಣುತ್ತಿದೆ.
ರಾಜ್ಯದ ಗಡಿಭಾಗದಲ್ಲಿರುವ ಈಗಾಗಲೇ ಕೇರಳ, ಮಹಾರಾಷ್ಟ್ರದಲ್ಲಿ ಕರೋನಾ ಮೂರನೇ ಅಲೆ ಹೆಚ್ಚಳವಾಗಿದ್ದು, ಅಲ್ಲಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರನ್ನು ಪರಿಶೀಲನೆ ನಡೆಸಲಾಗುತ್ತಿದೆ. ಈಗಾಗಲೇ ಹಂತ ಹಂತವಾಗಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಅದರಂತೆ ಈಗ ಸರ್ಕಾರಿ, ಖಾಸಗಿ, ಅನುದಾನಿತ ಪದವಿ ಕಾಲೇಜುಗಳಿಗೆ ಪ್ರಾರಂಭಿಸಲು ನೀಡಲಾಗಿದ್ದ ಸೂಚನೆಯನ್ನು ಸರ್ಕಾರ ಹಿಂಪಡೆದಿರುವುದು ಕೂಡ ಇದಕ್ಕೆ ನಿದರ್ಶನವಾಗಿದೆ.