ದಕ್ಷತೆಯಿಂದ ಕೆಲಸ ಮಾಡಿದರೆ ಅವರ ಕುಟುಂಬದ ಜೊತೆ ನಾವಿರುತ್ತೇವೆ ಎಂಬ ಸಂದೇಶ ಸಾರಿದ ಡಾ. ಪ್ರಭಾ ಮಲ್ಲಿಕಾರ್ಜುನ್
ದಾವಣಗೆರೆ: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಬಾಪೂಜಿ ಮಕ್ಕಳ ಆಸ್ಪತ್ರೆಯ ಅಂಗವಿಕಲ ಉದ್ಯೋಗಿ ಮಂಜುನಾಥ್ ನಿಧನ ಹೊಂದಿದ್ದು, ಅವರ ಪತ್ನಿ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ ಎಂದು ಡಾ. ಪ್ರಭಾ ಮಲ್ಲಿಕಾರ್ಜುನ್ ರವರ ಬಳಿ ಮನವಿ ಸಲ್ಲಿಸಿದಾಗ, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರದ ಡಾ. ಗುರುಪ್ರಸಾದ್ ರವರ ಬಳಿ ಮಂಜುನಾಥ್ ಕೆಲಸದ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆದು ಅವರು ಪತ್ನಿಗೆ ಅನುಕಂಪದ ಆಧಾರದಲ್ಲಿ ಆಸ್ಪತ್ರೆಯಲ್ಲಿ ಕೆಲಸ ನೀಡಲು ಸ್ಥಳದಲ್ಲಿಯೇ ಸೂಚಿಸಿದರು.