ಅಸಂಘಟಿತ ಕಾರ್ಮಿಕರಿಗೆ ಫುಡ್ ಕಿಟ್ ವಿತರಣೆ

food kit

ದಾವಣಗೆರೆ : ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್ ರವರ ಮಾರ್ಗದರ್ಶನದಲ್ಲಿ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 32ನೇ ವಾರ್ಡಿನಲ್ಲಿ ಹಿಂದುಳಿದ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಆಹಾರದ ಕಿಟ್ಟುಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಓಬಿಸಿ ಅಧ್ಯಕ್ಷ ಅಡಾಣಿ ಸಿದ್ದಪ್ಪ , ಓಬಿಸಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್.ಪಿ.ಶ್ರೀನಿವಾಸ್, ಉತ್ತರ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ಉಮೇಶ್ ಪಾಟೀಲ್, ರಾಜ್ಯ ಅಲ್ಪಸಂಖ್ಯಾತರ ಮೋರ್ಚಾದ ಸದಸ್ಯ ಅಬ್ಧುಲ್ ಮಜೀದ್ ,ಮಹಿಳಾ ಮೋರ್ಚಾದ ರೇಖಾ ವಾಲಿ, ಜ್ಯೋತಿ ಬಸಪ್ಪ, ಚಂದ್ರಕಲಾ, ಜಿ.ಎಸ್.ಪರಶುರಾಮ, ಕೆ.ನಾಗೇಶ್ ಕುಮಾರ್, ಮಂಜುನಾಥ್ ಇತರರು ಹಾಜರಿದ್ದರು

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!