Shanthisagara: ಶಾಂತಿಸಾಗರ ಹಿನ್ನೀರು ಪ್ರದೇಶಕ್ಕೆ ಉಪಲೋಕಾಯುಕ್ತರು ಭೇಟಿ ಒತ್ತುವರಿ ಪ್ರದೇಶ ಪರಿಶೀಲನೆ

ದಾವಣಗೆರೆ: ( Shanthisagara) ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಶಾಂತಿಸಾಗರ ಹಿನ್ನೀರು ಪ್ರದೇಶಕ್ಕೆ ಉಪಲೋಕಾಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಂತಿಸಾಗರ ಕೆರೆ ಒಟ್ಟು 5447.10 ಎಕರೆ ಪ್ರದೇಶ ಹೊಂದಿದೆ. ಇದರಲ್ಲಿ ಪ್ರಸ್ತುತ 219.10 ಎಕರೆ ಒತ್ತುವರಿಯಾಗಿದೆ ಎಂದು ಗುರುತಿಸಲಾಗಿದೆ. ಕೆರೆಯಲ್ಲಿನ ಹೂಳೆತ್ತುವ ಮೂಲಕ ಅಧಿಕ ನೀರು ಸಂಗ್ರಹ ಸಾಧ್ಯವಿದೆ. ಇದರಿಂದ ಅಂತರ್ಜಲ ಮಟ್ಟ ಹೆಚ್ಚಿಸಲು ಸಹಕಾರಿ, ಜೊತೆಗೆ ನೀರಿನ ಸಂಗ್ರಹ ಸಾಮರ್ಥ್ಯವು ಹೆಚ್ಚಲಿದೆ. ರೈತರು ಸಹ ಇದಕ್ಕೆ ಸಹಕಾರ ನೀಡಬೇಕೆಂದರು.
ಕೆರೆಯನ್ನು ರಕ್ಷಣೆ ಮಾಡದೇ ಹೋದರೆ ನಮ್ಮ ಮುಂದಿನ ಪೀಳಿಗೆಗೆ ಕಷ್ಟಕರವಾಗುತ್ತದೆ ಎಂದು ನ್ಯಾಯಮೂರ್ತಿ ಉಪ ಕೋಕಾಯುಕ್ತ ಬಿ. ವೀರಪ್ಪ ರೈತರಿಗೆ ಮಾಹಿತಿ ನೀಡಿದರು.