Manual Scavenger : ಮ್ಯಾನ್ಯುಯಲ್ ಸ್ಕಾವೆಂಜರ್‌ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ 2013ರ ಅನುಷ್ಠಾನ ಸಮಿತಿ ಸಭೆ: ಡಿ.ಸಿ ಗಂಗಾಧರಸ್ವಾಮಿ 

Manual Scavenger: Prohibition of Manual Scavenger Recruitment and Rehabilitation Act 2013 Implementation Committee Meeting: DC Gangadharaswamy

filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 5767168;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 34;

ಅರ್ಹ ಫಲಾನುಭವಿಗಳಿಗೆ ಗುರುತಿನ ಚೀಟಿ, ನಿವೇಶನ ಕಲ್ಪಿಸಿ

ದಾವಣಗೆರೆ : Manual Scavenger  ಜಿಲ್ಲಾ ಹಾಗೂ ತಾಲ್ಲೂಕು ವ್ಯಾಪ್ತಿಯಲ್ಲಿ ಗುರುತಿಸಿದ ಎಲ್ಲಾ ಅರ್ಹ ಮ್ಯಾನ್ಯುಯಲ್ ಸ್ಕಾವೆಂಜರ್‌, ಸಫಾಯಿ ಕರ್ಮಚಾರಿಗಳನ್ನು ಸಮೀಕ್ಷೆ ಮಾಡಿ ಅವರಿಗೆ ಗುರುತಿನ ಚೀಟಿ, ನಿವೇಶನ ರಹಿತರಿಗೆ ನಿವೇಶನ ಹಾಗೂ ಪನರ್ವಸತಿ ಕಲ್ಪಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಾಕೀತು ಮಾಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಮ್ಯಾನ್ಯುಯಲ್ ಸ್ಕಾವೆಂಜರ್‌ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ 2013ರ ಅನುಷ್ಠಾನ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ 245, ಹರಿಹರ ನಗರಸಭೆ ವ್ಯಾಪ್ತಿಯಲ್ಲಿ 78 ಸೇರಿ ಒಟ್ಟು 388 ಮ್ಯಾನ್ಯುಯಲ್ ಸ್ಕಾವೆಂಜರ್‌ಗಳಿದ್ದು, ಈ ಪೈಕಿ 372 ಸ್ಕಾವೆಂಜರ್‌ಗಳಿಗೆ ಗುರುತಿನ ಚೀಟಿ ನೀಡಿದೆ. ಇನ್ನುಳಿದ 16 ರಲ್ಲಿ 4 ಜನರು ಮರಣ ಹೊಂದಿದ್ದು, 12 ಜನ ಫಲಾನುಭವಿಗಳು ಸ್ಥಳದಲ್ಲಿ ಲಭ್ಯವಿಲ್ಲದ ಕಾರಣ ಕಾರ್ಡ್ ವಿತರಿಸಲಾಗಿಲ್ಲ.

ನಗರ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಲ್ಲಿ ಮಂಜೂರಾದ ಪೌರಕಾರ್ಮಿಕ, ಸೆಕ್ಯೂರಿಟಿ ಗಾರ್ಡ್, ವಾಹನ ಚಾಲಕ, ನೀರು ಸರಬರಾಜು ಸಹಾಯಕ, ಎಸ್.ಡಬ್ಲೂ.ಎಂ. ಫೀಲ್ಡ್ ವರ್ಕರ್ ಸೇರಿ 9 ಜನರನ್ನು ಹೊರಗುತ್ತಿಗೆ ಆಧಾರದಡಿ ಹಾಗೂ ಲೋಡರ್ ಹುದ್ದೆಗಳಿಗೆ 3 ಕಾರ್ಮಿಕರನ್ನು ಖಾಯಂ ನೇಮಕ ಮಾಡಲಾಗಿದೆ ಎಂದರು. ಶೌಚಾಲಯಗಳ ನಿರ್ವಹಣಾ ಟೆಂಡರ್, ಸಫಾಯಿ ಕರ್ಮಚಾರಿಗಳು ಮತ್ತು ಗುರುತಿಸಿದ ಮ್ಯಾನ್ಯುಯಲ್ ಸ್ಕಾವೆಂಜರ್ರ‍್ಗಳಿಗೆ ಮೀಸಲಿಗೆ ಅನುಗುಣವಾಗಿ ಟೆಂಡರ್ ಪ್ರಕ್ರಿಯೆ ನಡೆಸಿ ಸ್ಕಾವೆಂಜರ್‌ಗಳಿಗೆ ಪ್ರಥಮಾದ್ಯತೆ ನೀಡಬೇಕು.

ನಿವೇಶನ ರಹಿತ 297 ಸ್ಕಾವೆಂಜರ್‌ ಕುಟುಂಬಗಳಿಗೆ ಅಗತ್ಯವಾಗಿ ನಿವೇಶನ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಬಧಪಟ್ಟ ಅಧಿಕಾರಿಗಳು ಮಹಾನಗರ ಪಾಲಿಕೆ ವ್ಯಾಪ್ತಿಗೊಳಪಡುವ ದೊಡ್ಡಬಾತಿ ಗ್ರಾಮದಲ್ಲಿ 8 ಎಕರೆ 8 ಗುಂಟೆ ಭೂಮಿ ಗುರುತಿಸಿದ್ದು, ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು. 59 ಸ್ಕಾವೆಂಜರ್‌ ಕುಟುಂಬಗಳಿಗೆ ವಸತಿ ಸೌಲಭ್ಯ: ನಗರ ಸ್ಥಳೀಯ ಸಂಸ್ಥೆಗಳು ಸೇರಿ ಜಿಲ್ಲೆಯಲ್ಲಿ 388 ಸ್ಕಾವೆಂಜರ್‌ಗಳ ಪೈಕಿ 59 ನಿವೇಶನ ಲಭ್ಯವಿರುವ ಕುಟುಂಬಗಳು ಎಂದು ಗುರುತಿಸಲಾಗಿದೆ. ಅದರಲ್ಲಿ ದೇವರಾಜ್ ಅರಸು ವಸತಿ ಯೋಜನೆಯಡಿ 16 ಫಲಾನುಭವಿಗಳ ಪಟ್ಟಿ ಅನುಮೋದನೆ ಪಡೆಯಲಾಗಿದೆ.

ಬಾಕಿ ಉಳಿದ ಫಲಾನುಭವಿಗಳಿಗೆ ವಿವಿಧ ತಾಂತ್ರಿಕ ಮತ್ತು ದಾಖಲಾತಿಗಳ ಕಾರಣಗಳಿಂದ ಬಾಕಿ ಇದ್ದು, ಶೀಘ್ರದಲ್ಲೇ ಉಳಿದ ಫಲಾನಭವಿಗಳಿಗೂ ಅನುಮೋದನೆ ಪಡೆದು ವಸತಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಮ್ಯಾನ್ಯುಯಲ್ ಸ್ಕಾವೆಂಜರ್‌ಗಳಿಗೆ ಸರ್ಕಾರದ ಯೋಜನೆ, ಸಾಲ, ಸೌಲಭ್ಯಗಳನ್ನು ಸಮರ್ಪಕವಾಗಿ ಸಕಾಲದಲ್ಲಿ ಅರ್ಹ ಫಲಾನುಭವಿಗಳಿಗೆ ಒದಗಿಸಿ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಮುನ್ನಲೆಗೆ ಬರಲು ಅಧಿಕಾರಿಗಳು ಸಹಕರಿಸಬೇಕು ಎಂದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ ಹೆಗಡೆ, ಪಾಲಿಕೆ ಆಯುಕ್ತೆ ರೇಣುಕಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಮಹಾಂತೇಶ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೆ.ನಾಗರಾಜ್, ಜಿ.ಪಂ. ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ್, ನಾಮ ನಿರ್ದೇಶಿತ ಸದಸ್ಯರಾದ ಶಂಕರ್, ರಘುಪತಿ, ಓಬಳೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘಟನೆಗಳ ಪದಾಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿಗಳು

error: Content is protected !!