ಶೀಘ್ರವೇ ಕೈಗಾರಿಕಾ ಪ್ರದೇಶಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಆರಂಭ :ಸಂಸದ ಜಿಎಂ ಸಿದ್ದೇಶ್ವರ್

ದಾವಣಗೆರೆ : ಶೀಘ್ರದಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಂಸದ ಡಾ: ಜಿಎಂ ಸಿದ್ದೇಶ್ವರ ತಿಳಿಸಿದ್ದಾರೆ.
ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಬೆಂಗಳೂರು ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಇವುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ವಾಣಿಜ್ಯ ಸಪ್ತಾಹ ಹಾಗೂ ರಫ್ತುದಾರರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು ಕೈಗಾರಿಕಾ ಇಲಾಖೆಯ ಪ್ರಗತಿ ಪರಿಶೀಲನಾಸಭೆ ನಡೆಸಿದ ಸಂದರ್ಭದಲ್ಲಿ ಉದ್ದಿಮೆಗಳು ಕೈಗಾರಿಕಾ ಸ್ಥಾಪನೆಗಾಗಿ ಸ್ಥಳ ನೀಡುವಂತೆ ಮನವಿ ಮಾಡಿದ್ದರೂ
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಕೈಗಾರಿಕಾ ಪ್ರದೇಶಕ್ಕೆ ಜಮೀನು ಗುರುತಿಸಿದ್ದು ಭೂಸ್ವಾಧೀನ ಪ್ರಕ್ರಿಯೆ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದರು.
ಹೊರಗಡೆಯಿಂದ ಬಂದು ಜಿಲ್ಲೆಯಲ್ಲಿ ಉದ್ಯಮ ಸ್ಥಾಪಿಸುವ ಕೈಗಾರಿಕೋದ್ಯಮಿಗಳಿಗೆ ಕೆಐಎಡಿಬಿ ಇಂದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು
ಜಿಲ್ಲೆಯು ಕೈಗಾರಿಕಾ ಕ್ಷೇತ್ರದಲ್ಲಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಏರ್ಪೋರ್ಟ್ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ ಹೀಗಾಗಿ ದಾವಣಗೆರೆ ಅಡಿಕೆನಾಡಗಿದೆ ಅಲ್ಲದೆ ಮೆಕ್ಕೆಜೋಳ ಭತ್ತದ ಬೆಳೆಗಳನ್ನು ರೈತರು ಬೆಳೆಯುತ್ತಿದ್ದು ಸಿರಿಧಾನ್ಯಗಳನ್ನು ಬೆಳೆಯಲು ರೈತರು ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಶಾಸಕ ಎಸ್ಎ ರವೀಂದ್ರನಾಥ್ ಮಾತನಾಡಿ ಒಂದು ಕಾಲದಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಂಗಾ ರಫ್ತು ಆಗುತ್ತಿತ್ತು ಆದರೆ ಈಗ ನಿಂತಿದ್ದು ಮತ್ತೆ ಜಿಲ್ಲೆಯಲ್ಲಿ ಶೇಂಗಾ ಎಣ್ಣೆ ಸೇರಿದಂತೆ ಇತರ ಉತ್ಪನ್ನಗಳ ರಫ್ತು ಮಾಡುವ ನಿಟ್ಟಿನಲ್ಲಿ ಉದ್ಯಮಿಗಳು ಬೆಳೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವರಮನೆ ಶಿವಕುಮಾರ್,ಮಹಾ ಪೌರ ಎಸ್ಟಿ ವೀರೇಶ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಬಿ ರಿಷಂತ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಜಯಪ್ರಕಾಶ್ ನಾರಾಯಣ್ ಬೆಂಗಳೂರು ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಅಕ್ಷಯ್, ಇನ್ನಿತರರು ಇದ್ದರು