ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ದಾವಣಗೆರೆಯಲ್ಲಿ 29ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

ದಾವಣಗೆರೆ: ಅಡುಗೆ ಅನಿಲ, ಪೆಟ್ರೋಲ್- ಡಿಸೇಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಸೆಪ್ಟೆಂಬರ್ 29ರಂದು ಮಾಜಿ ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ, ಮಾಜಿ ಮಂತ್ರಿಗಳಾದ ಡಾ|| ಶಾಮನೂರು ಶಿವಶಂಕರಪ್ಪ, ಎಸ್.ಎಸ್.ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು
ಅಂದು ಬೆಳಿಗ್ಗೆ 11.30ಕ್ಕೆ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಮತ್ತು ಮಾಜಿ ಮುಖ್ಯಮಂತ್ರಿಡಿ ದೇವರಾಜ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡುವುದರ ಮುಖಾಂತರ ಆರಂಭಗೊಳ್ಳುವ ಪ್ರತಿಭಟನೆಯನ್ನು ಉದ್ದೇಶಿಸಿ ವಿರೋಧ ನಾಯಕರಾದ ಸಿದ್ದರಾಮಯ್ಯನವರು, ಶಾಸಕರಾದ ಶಾಮನೂರು ಶಿವಶಂಕರಪ್ಪನವರು ಮತ್ತು ಮಾಜಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಮಾತನಾಡುವರು.
ನಂತರ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಎ.ನಾಗರಾಜ್, ಮಂಜುನಾಥ್ ಗಡಿ ಗುಡಾಳ್, ಮಂಜುನಾಥ್ ಇಟ್ಟಿಗುಡಿ, ಅಯುಬ್ ಪೈಲ್ವಾನ್, ಚಮನ್ ಸಾಬ್, ಯುವರಾಜ್, ಜಮ್ಮನಹಳ್ಳಿ ನಾಗರಾಜ, ಡೋಲಿ ಚಂದ್ರು, ದ್ರಾಕ್ಷಾಯಣಮ್ಮ, ದೀಪ ಇನ್ನಿತರರು ಇದ್ದರು