ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ದಿಂದ 29ಕ್ಕೆ ಬೃಹತ್ ಧರಣಿ ಸತ್ಯಾಗ್ರಹ

ದಾವಣಗೆರೆ: ಕರ್ನಾಟಕ ರಾಜ್ಯ ಹಿಂದುಳಿ ಜಾತಿಗಳ ಒಕ್ಕೂಟ ಹಾಗೂ ದಾವಣಗೆರೆ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟ ಇವರ ಆಶ್ರಯದಲ್ಲಿ ಧರಣಿ ಸತ್ಯಾಗ್ರಹ ನೆಡೆಯಲಿದೆ ಎಂದು ಕುರುಬ ಸಮಾಜದ ಮುಖಂಡ ಪಿ ರಾಜಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರೂ ರಾಜ್ಯದ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಬೆಳಿಗ್ಗೆ 10.30 ಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು.ಪ್ರತಿಭಟನೆಯಲ್ಲಿ ಮಾಯಕೊಂಡ ಹರಿಹರ ಹೊನ್ನಾಳಿ ಚನ್ನಗಿರಿ ಜಗಳೂರು ಹರಪನಹಳ್ಳಿ ಸೇರಿದಂತೆ ಹಲವು ಭಾಗಗಳಿಂದ ಸಮಾಜಬಾಂಧವರು ಮುಖಂಡರು ಆಗಮಿಸಲಿದ್ದಾರೆ ಎಂದರು.
ನಮ್ಮ ಬೇಡಿಕೆಗಳಾದ ಎಚ್ ಕಾಂತರಾಜು ಆಯೋಗ ನೇತೃತ್ವದಲ್ಲಿ ನಡೆದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿವಾರು ಸಮೀಕ್ಷೆಯ ವರದಿಯನ್ನು ಈ ಕೂಡಲೇ ಬಿಡುಗಡೆ ಮಾಡಬೇಕು, 2 ಎ ಮೀಸಲಾತಿ ಪಟ್ಟಿಗೆ ಯಾವುದೇ ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮತ್ತು ಎಲ್ಲಾ ರೀತಿಯಿಂದಲೂ ಮುಂದುವರೆದ ಪ್ರಬಲವಾಗಿರುವ ಜಾತಿಗಳನ್ನು ಪ್ರವರ್ಗ-2ಎ ಮೀಸಲಾತಿ ಪಟ್ಟಿಗೆ ಸೇರಿಸಬಾರದು, ವಿಧಾನಸಭೆ ಮತ್ತು ಲೋಕಸಭೆಯಲ್ಲಿ ನೀವು ಸಹ ಎಸ್ಸಿ-ಎಸ್ಟಿ ಗೆ ಮೀಸಲಿಡುವಂತೆ ಹಿಂದುಳಿದ ವರ್ಗಗಳಿಗೂ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಮೀಸಲಾತಿ ನೀಡಬೇಕೆಂಬುದು ಸೇರಿದಂತೆ ಅನೇಕ ಬೇಡಿಕೆಗಳಿಗೆ ಒತ್ತಾಯಿಸಲಾಗುವುದು ಎಂದರು,
ಸುದ್ದಿಗೋಷ್ಠಿಯಲ್ಲಿ ಕೊಕ್ಕನೂರು ದ್ಯಾವಪ್ಪ, ಬಿಹೆಚ್ ಪರಶುರಾಮಪ್ಪ, ಎಚ್ ಬಿ ಗೋಣೆಪ್ಪ,ಬಳ್ಳಾರಿ ಜಯಣ್ಣ, ಕೆ ರೇವಣಸಿದ್ದಪ್ಪ, ನಲ್ಕುಂದ ಹಾಲೇಶ್ ಸೇರಿದಂತೆ ಇನ್ನಿತರರಿದ್ದರು